ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ ಪೆರ್ಣಕ್ಕೆ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಆರಂಭಿಸಿತ್ತು. ಮಾರ್ಗ ಮಧ್ಯೆ ಅಸ್ನೋಟಿ ಎಂಬಲ್ಲಿ ಎಂಜಿನ್ ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ತನ್ನ ಪ್ರಯಾಣವನ್ನು ನಿಲ್ಲಿಸಿತು.ಈ ರೈಲು ಪ್ರತಿದಿನ ಕಾರವಾರದಿಂದ ಗೋವಾ ರಾಜ್ಯದ ಪೆರ್ಣಕ್ಕೆ ಸಂಚರಿಸುತ್ತದೆ. ಮೂರು ಬೋಗಿಗಳನ್ನು ಹೊಂದಿರುವ ಈ ರೈಲಿನಲ್ಲಿ ಪ್ರತಿದಿನ ಸುಮಾರು 600 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಈ ಹಿಂದೆಯೂ ಇದೇ ರೀತಿಯಲ್ಲಿ ಎಂಜಿನ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಈ ಸಂಬಂಧ ಪ್ರಯಾಣಿಕರು ರೈಲ್ವೆ ಇಲಾಖೆಗೆ ದೂರು ನೀಡಿದ್ರೂ ಇಲಾಖೆ ಮಾತ್ರ ಯಾವುದೇ ಕ್ರಮ ಜರುಗಿಸಿರಲಿಲ್ಲ.ಇದರಿಂದ ಕೋಪಗೊಂಡ ಜನರು ಕೆಟ್ಟು ನಿಂತಿದ್ದ ರೈಲಿನ ಮುಂದೆ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದು ಬದಲಿ ವ್ಯವಸ್ಥೆ ಮಾಡಿದ್ದ ರೈಲನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.


 






 Advertisement 




 Sign in to your account
Username or Email Address


Password

 Remember Me


