ಮೈಸೂರು: ಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಭೀಕರ ಅಪಘಾತ ಹುಣಸೂರಿನ ಹೆಚ್.ಡಿ.ಕೋಟೆ ರಸ್ತೆಯಲ್ಲಿ ಸಂಭವಿಸಿದೆ.ಹುಣಸೂರಿನ ನಲ್ಲೂರು ಪಾಲಾ ಗ್ರಾಮದ ಬಳಿ ಟವೇರಾ ಕಾರು ಪಲ್ಟಿಯಾಗಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಬೆಂಗಳೂರಿನವರೆಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅತಿಯಾದ ವೇಗದ ಚಾಲನೆಯಿಂದಲೇ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು ಹುಣಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರ ವಿವರ: ಘಟನೆಯಲ್ಲಿ ಮೃತಪಟ್ಟವರನ್ನು ಘೋರ್ಪಡೆ (49), ರಾಜನ್ ಸೋಲಂಕಿ (25), ಕೌಶಿಕ್ ಚೌಹಾಣ್ (32) ಹಾಗೂ ಕಿಶೋರ್ ಯಾದವ್ ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರಶೇಖರ್, ಯಶ್ವಂತ್ ರಾವ್ ಘೋರ್ಪಡೆ, ವಿಜಯ್ ಘೋರ್ಪಡೆ ಗಾಯಾಳುಗಳಾಗಿದ್ದು ಇವರಿಗೆ ಚಿಕಿತ್ಸೆ ಮುಂದುವರೆದಿದೆ. ಗಾಯಾಳು ಚಂದ್ರಶೇಖರ್ ಎಂಬವರ ಕುಟುಂಬದವರಿಗೆ ಮದುವೆಗೆ ಆಹ್ವಾನಿಸಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.  Sign in to your account
Username or Email Address


Password

 Remember Me


