ಮಡಿಕೇರಿ: ರಾಜ್ಯದ ಎಷ್ಟೋ ಸಮುದಾಯಗಳಿಗೆ ಈಗಲೂ ಮಾತನಾಡಲು ಸರಿಯಾದ ಭಾಷೆ ಇಲ್ಲ. ಹೀಗಾಗಿ, ಸಂಸ್ಕøತಿ-ಭಾಷೆಗಳು ಅವಸಾನ ಕಂಡಿವೆ. ಆದ್ರೆ, ಇಂಥ ಶ್ರೀಮಂತ ಸಂಸ್ಕೃತಿ ಮರೆಯಾಗಬಾರದು ಅಂತ ಕೊಡಗಿನ ಮಹಿಳೆಯೊಬ್ಬರು ಪಣತೊಟ್ಟಿದ್ದಾರೆ.ಕೊಡಗು ಜಿಲ್ಲೆಯ ಭಾಗಮಂಡಲದ ಮಿಲನ ಭರತ್, ಮೀನುಗಾರಿಕೆ ವಿಷಯದಲ್ಲಿ ಪದವಿ ಮತ್ತು ಮಾರುಕಟ್ಟೆ ನಿರ್ವಹಣೆ ವಿಷಯದಲ್ಲಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಪ್ರಥಮ ಶ್ರೇಯಾಂಕ ಗಳಿಸಿದ್ದಾರೆ. ಪ್ರಸ್ತುತ ಸೋಮವಾರಪೇಟೆ ತಾಲೂಕಿನ ಮೀನುಗಾರಿಕೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸ್ತಿದ್ದಾರೆ. ಸರ್ಕಾರಿ ಅಧಿಕಾರಿಯಾಗಿದ್ರೂ ರಜೆ ದಿನಗಳಲ್ಲಿ ತಮ್ಮ ಗೌಡ ಸಮುದಾಯದ ಅರೆ ಭಾಷೆ ಸಂಸ್ಕೃತಿ ಉಳಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಮಂಡಲ ಗ್ರಾಮದಲ್ಲಿ ಕಳೆದ 14 ವರ್ಷಗಳಿಂದ `ಅಭಿನಯ ಕಲಾ ಮಿಲನ ಚಾರಿಟಬಲ್ ಟ್ರಸ್ಟ್’ ಅಡಿ `ನಾಟ್ಯ ಮಿಲನ ನೃತ್ಯ ಶಾಲೆ’ ಮೂಲಕ ಉಚಿತ ನೃತ್ಯ ತರಬೇತಿ ನೀಡ್ತಿದ್ದಾರೆ.ಗೌಡರ ಸಾಂಪ್ರದಾಯಿಕ ನೃತ್ಯ ಪ್ರಕಾರಗಳಾದ ಹುತ್ತರಿ ಕೋಲು, ಸುಗ್ಗಿ ಕುಣಿತ, ಭೂತಕೋಲ, ಆಟಿ ಕಳಂಜ, ಜೋಗಿ ಕುಣಿತ, ಸೋಬಾನೆ ಪದ ಇವುಗಳನ್ನು ಪ್ರದರ್ಶನ ಕಲೆಯಾಗಿ ವೇದಿಕೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. “ಅರೆ ಭಾಷೆ ಗೌಡರ ಸಿರಿ ಸಂಸ್ಕøತಿ” ಎಂಬ ಹೆಸರಿನಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇವರ ತಂಡ ಪ್ರದರ್ಶನ ನೀಡಿದೆ.ನೃತ್ಯ ಶಾಲೆಯಲ್ಲಿ ಕಲಿಯುವ ಬಡ ಮಕ್ಕಳ ವೇಷ ಭೂಷಣ, ಕಾರ್ಯಕ್ರಮ ನೀಡುವ ಪ್ರಯಾಣದ ವೆಚ್ಚ ಎಲ್ಲವನ್ನೂ ಟ್ರಸ್ಟ್ ಮೂಲಕ ಭರಿಸಲಾಗ್ತಿದೆ. ಇನ್ನು ಸಾಹಿತ್ಯದತ್ತ ಒಲವು ಹೊಂದಿರೋ ಮಿಲನ ಅವರು ಭಾವಲಹರಿ ಮತ್ತು ಮೌನ ಮುರಿಯೋ ಸಮಯ ಅನ್ನೋ ಕವನ ಸಂಕಲನ ಹಾಗೂ “ಕೊಡಗಿನಲ್ಲಿ ಐನ್ ಮನೆಗಳು” ಎನ್ನುವ ಪುಸ್ತಕವನ್ನು ಪ್ರಕಟಿಸಿದ್ದಾರೆ.Sign in to your account
Username or Email Address


Password

 Remember Me


