ಉಡುಪಿ: ಸ್ಯಾಂಡಲ್ ವುಡ್ ನಲ್ಲಿ ಒಂದೆಡೆ ಸಾಲು ಸಾಲು ಚಿತ್ರಗಳು ತೆರೆ ಕಾಣುತ್ತಿದ್ದರೆ ಇತ್ತ ಕರಾವಳಿಯಲ್ಲಿ ತುಳು ಚಿತ್ರಗಳ ಸಂಖ್ಯೆ ದಿನೇ ದಿನೆ ಜಾಸ್ತಿಯಾಗುತ್ತಿದೆ. ಈ ನಡುವೆ ಉಡುಪಿಯಲ್ಲಿ `ದಿಬ್ಬಣ’ ಅನ್ನೋ ಚಿತ್ರದ ಧ್ವನಿ ಸುರುಳಿ ಬಿಡುಗಡೆಯಾಗಿದೆ.ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಾರಿನ್ ಕಂಬೈನ್ಸ್ ರವರ “ರಂಗ್ ರಂಗ್ ದ ದಿಬ್ಬಣ” ತುಳು ಚಿತ್ರದ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಿದರು.ಸಿಡಿ ಬಿಡುಗಡೆ ಮಾಡಿ ಮಾತನಾಡಿದ ಸ್ವಾಮೀಜಿ, ತುಳು ಭಾಷೆಯಲ್ಲಿ ಹಲವಾರು ಚಲನಚಿತ್ರಗಳು ಬರುತ್ತಿದೆ. ಚಲನಚಿತ್ರಗಳ ಸಂಖ್ಯೆ ಜಾಸ್ತಿಯಾಗುವುದು ಸಾಧನೆಯಲ್ಲ. ಅದು ಜನರ ಮನಸ್ಸಿಗೆ ಎಷ್ಟರ ಮಟ್ಟಿಗೆ ಧನಾತ್ಮಕ ಚಿಂತನೆಗಳನ್ನು ಕೊಡುತ್ತದೆ ಎಂಬುವುದು ಮುಖ್ಯ. ಕೃಷ್ಣಮಠದಲ್ಲಿ ಹಲವಾರು ಚಲನಚಿತ್ರಗಳ ಮುಹೂರ್ತಗಳು ನಡೆದಿದೆ. ಭಕ್ತಿಪ್ರಧಾನ ಚಿತ್ರಗಳು ಕೂಡಾ ಬರಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ನಿರ್ಮಾಪಕ ಶರತ್ ಕೋಟ್ಯಾನ್, ನಿರ್ದೇಶಕ ಕೃಷ್ಣ ಪ್ರಸಾದ್ ಉಪ್ಪಿನಕೋಟೆ, ಸಂಗೀತ ನಿರ್ದೇಶಕ ಎಸ್.ಪಿ.ಚಂದ್ರಕಾಂತ್, ನಾಯಕ ನಟ ನಟಿಯರಾದ ರವಿರಾಜ್ ಶೆಟ್ಟಿ, ಪ್ರಶಾಂತ್ ಸಾಮಗ, ಸ್ವಾತಿ ಬಂಗೇರ, ಸಂಹಿತಾ ಶಾ ಮುಂತಾದವರು ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


