ಚಿಕ್ಕಮಗಳೂರು: ಆರೋಪಿಗಳನ್ನು ಠಾಣೆಯಿಂದ ಬಿಟ್ಟು ಕಳುಹಿಸಿ ಕರ್ತವ್ಯ ಲೋಪ ಎಸಗಿದ್ದಕ್ಕೆ ಪೊಲೀಸ್ ವರಿಷ್ಟಾಧಿಕಾರಿ ಶೋಕಾಸ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಎನ್‍ಆರ್‍ಪುರ ಠಾಣೆ ಪಿಎಸ್‍ಐ ಸುನೀತಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಭೇಟಿ ನೀಡಿ ಮನವೊಲಿಸಿದ ನಂತರ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಣ್ಣಾಮಲೈ ಶುಕ್ರವಾರ ಮುಂಜಾನೆ 4.30ರವರೆಗೂ ಎನ್.ಆರ್.ಪುರದಲ್ಲೇ ಇದ್ದು, ಪರಿಸ್ಥಿತಿಯನ್ನು ನಿಭಾಯಿಸಿದರು.ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳನ್ನು ಡಿಸಿಐಬಿ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಒಪ್ಪಿಸಿದ್ದರು. ಠಾಣೆ ಪೊಲೀಸರು ಆರೋಪಿಗಳನ್ನು ಬಿಟ್ಟುಕಳುಹಿಸಿ, ನಂತರ ಪ್ರಕರಣ ದಾಖಲಿಸಿದ್ದರು. ಎಎಸ್ಪಿ ಅಣ್ಣಪ್ಪನಾಯ್ಕ ಅವರಿಗೆ ತನಿಖೆ ನಡೆಸಲು ಎಸ್ಪಿ ಸೂಚಿಸಿದ್ದರು.ಪ್ರಕರಣ ನಿರ್ವಹಿಸುವಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಜಗನ್ನಾಥ ಮತ್ತು ಪಿಎಸ್‍ಐ ಸುನೀತಾ ಕರ್ತವ್ಯ ಲೋಪ ಎಸಗಿರುವುದು ತನಿಖೆಯಲ್ಲಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಎಸ್ಪಿ ಇಬ್ಬರಿಗೂ ನೋಟಿಸ್ ನೀಡಿದ್ದರು. ತಪ್ಪು ಮಾಡಿರುವುದು ಸಾಬೀತಾದರೆ ಇಬ್ಬರ ವಿರುದ್ಧವೂ ಕ್ರಮಜರುಗಿಸುವ ಅಧಿಕಾರ ತನಗೆ ಇದೆ ಎಂದು ಎಸ್ಪಿ ಇತ್ತೀಚೆಗಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.ಅಮಾನತು ಆಗುವ ಭೀತಿಯಲ್ಲಿ ಪಿಎಸ್ ಐ ಆತ್ಮಹತ್ಯೆಗೆ ಯತ್ನಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.






 Advertisement 




Sign in to your account
Username or Email Address


Password

 Remember Me


