ಚಿತ್ರದುರ್ಗ: ಬೆಂಗಳೂರಿನ ಬಿಜೆಪಿ ಮುಖಂಡ ವಾಸು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸತೀಶ್ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ.ಸತೀಶ್ ವಾಸು ಅವರನ್ನು ಹತ್ಯೆಗೈದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ತಾಲೂಕಿನ ಉಗಣೆಕಟ್ಟೆ ವಡರಹಟ್ಟಿ ಗ್ರಾಮದ ಅಜ್ಜಿ ಮನೆಯಲ್ಲಿ ತಲೆಮರೆಸಿಕೊಂಡಿದ್ದನು. ಇಂದು ಸತೀಶ್ ಅಜ್ಜಿಯ ಮನೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರಿನ ಹೊಸಕೋಟೆ ಪೊಲೀಸರ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.ಇದನ್ನೂ ಓದಿ: ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮುಖಂಡನ ಕೊಲೆಮಾರ್ಚ್ 14 ರಂದು ಬೆಳಗಿನ ಜಾವ 5 ಗಂಟೆಯಲ್ಲಿ ಬೊಮ್ಮಸಂದ್ರದ ಪುರಸಭಾ ಸದಸ್ಯ ವಾಸು ಅಲಿಯಾಸ್ ಶ್ರೀನಿವಾಸ್ ಪ್ರಸಾದ್ ಅವರನ್ನು ಹೊಸೂರು ರಸ್ತೆಯ ಬಿಟಿಎಲ್ ಕಾಲೇಜು ಮುಂಭಾಗದಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು.ಇದನ್ನೂ ಓದಿ: ಬಿಜೆಪಿ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು Sign in to your account
Username or Email Address


Password

 Remember Me


