ಬೆಂಗಳೂರು: ದುಷ್ಕರ್ಮಿಗಳು ಯುವಕನೊಬ್ಬನ ನಾಲಿಗೆ ಮತ್ತು ಮರ್ಮಾಂಗವನ್ನು ಕತ್ತರಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಒಡಿಸ್ಸಾ ಮೂಲದ 20 ವರ್ಷದ ಬಿಜು ನಾಯಕ್ ಹಲ್ಲೆಗೊಳಗಾದ ಯುವಕ. ಸದ್ಯ ಬಿಜು ನಗರದ ವೈದೇಹಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗುರುವಾರ ರಾತ್ರಿ ಬಿಜು ನಾಯಕ್ ಮನೆಯಿಂದ ಹೊರಬಂದು ಮೂತ್ರ ವಿಸರ್ಜನೆ ಮಾಡುವಾಗ ಮುಸುಕು ಹಾಕಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಇಮ್ಮಡಿಹಳ್ಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಾಲಿಗೆ ಮತ್ತು ಮರ್ಮಾಂಗವನ್ನು ಕತ್ತರಿಸಿದ್ದಾರೆ. ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.ಹಲ್ಲೆಗೊಳಗಾದ ಯುವಕ ರಾತ್ರಿಯಿಡೀ ಸ್ಥಳದಲ್ಲೇ ನರಳಾಡಿದ್ದು, ಬೆಳಗ್ಗೆ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಯುವಕ ಬಿಜುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


