ಬೆಂಗಳೂರು: ಇವತ್ತು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ಸೇರಬೇಕಿತ್ತು. ಆದ್ರೆ ಕೃಷ್ಣ ಅವರ ಸಹೋದರಿ ಸುನೀತಾ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಹೀಗಾಗಿ ಕೃಷ್ಣ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ.ಮಂಗಳವಾರದಂದು ಮಂಡ್ಯದ ಸೋಮನಹಳ್ಳಿಯಲ್ಲಿ ಕೃಷ್ಣ ಅವರ ಸಹೋದರಿ ಸುನೀತಾ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷ್ಣ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.ಸುನೀತಾ ಅವರ ಮೃತದೇಹವನ್ನು ಅವರು ವಾಸವಾಗಿರುವ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕರೆತರಲಾಗುತ್ತದೆ.Sign in to your account
Username or Email Address


Password

 Remember Me


