ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕು ಆಚೇಪಲ್ಲಿ ಕ್ರಾಸ್ ಬಳಿಯ ಅಯ್ಯಪ್ಪ ಎಂಟರ್‍ಪ್ರೈಸಸ್ ಅಂಗಡಿಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಯನ್ನ ನೀಡುತ್ತಿದ್ದ ನಕಲಿ ವೈದ್ಯನಿಗೆ ಶೋಕಾಸ್ ನೋಟಿಸ್ ಜಾರಿಯಾಗಿದೆ.ವರದಿಯ ಫಲಶೃತಿಯಾಗಿ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ತಾಲೂಕು ಆರೋಗ್ಯಾಧಿಕಾರಿ ಸತ್ಯನಾರಾಯಣ್ ಅವರು ನಕಲಿ ವೈದ್ಯ ನರೇಶ್‍ಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.  ಒಂದು ವಾರದೊಳಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಿ ಉತ್ತರ ನೀಡುವಂತೆ ನೋಟಿಸ್‍ನಲ್ಲಿ ಉಲ್ಲೇಖ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ರವಿ ಪ್ರಕಾಶ್ ನಕಲಿ ವೈದ್ಯರ ಕಡಿವಾಣಕ್ಕೆ ಕಾನೂನು ರೀತಿಯ  ಎಲ್ಲ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ನರೇಶ್ ಕಳೆದ ಮೂರು ವರ್ಷಗಳಿಂದ ಜನರಿಗೆ ಚಿಕಿತ್ಸೆ ನೀಡುತ್ತಿದ್ದನು. ಈ ಪ್ರಕರಣದ ಬೆನ್ನತ್ತಿದ್ದ ಪಬ್ಲಿಕ್ ರಹಸ್ಯ ಕಾರ್ಯಚರಣೆಯ ಮೂಲಕ ಪ್ರಕರಣವನ್ನು ಬಯಲು ಮಾಡಿತ್ತು.ಇದನ್ನೂ ಓದಿ: ಚಿಲ್ಲರೆ ಅಂಗಡಿಯಲ್ಲಿ ತಲೆ ಎತ್ತಿದೆ ಆಸ್ಪತ್ರೆ – ಅಂಗಡಿ ಮಾಲೀಕನೇ ಇಲ್ಲಿ ಡಾಕ್ಟರ್    Sign in to your account
Username or Email Address


Password

 Remember Me


