ಬೆಂಗಳೂರು: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳೆಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ನಮಗೂ ಟಿಕೆಟ್ ಬೇಕು ಅಂತಾ ಕೆಲ ಸಂಸದರು ಕ್ಯೂ ನಿಲ್ತಿದ್ದಾರೆ.ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿ ಅಂತ ಕೆಲ ಸಂಸದರು ಬಿಜೆಪಿ ವರಿಷ್ಠರಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದ್ರೆ ಸಂಸದರ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು, ಸದ್ಯಕ್ಕೆ ಎಂಪಿಗಳಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.ಯಾರಿಗೆ ಯಾವ ಕ್ಷೇತ್ರ ಬೇಕಂತೆ?
> ಶೋಭಾ ಕರಂದ್ಲಾಜೆ – ಪುತ್ತೂರು ಕ್ಷೇತ್ರ
> ಅನಂತಕುಮಾರ್ ಹೆಗಡೆ- ಯಲ್ಲಾಪುರ ಕ್ಷೇತ್ರ
> ಕರಡಿಸಂಗಣ್ಣ – ಕೊಪ್ಪಳ ಕ್ಷೇತ್ರ
> ಶ್ರೀರಾಮುಲು- ಬಳ್ಳಾರಿ ಗ್ರಾಮಾಂತರ ಕ್ಷೇತ್ರ, ಸಂಡೂರು ಕ್ಷೇತ್ರ
> ಪಿ.ಸಿ.ಮೋಹನ್- ಗಾಂಧಿನಗರ ಕ್ಷೇತ್ರSign in to your account
Username or Email Address


Password

 Remember Me


