ಬೀದರ್: ಬಹುದಿನಗಳಿಂದ ಪೊಲೀಸರಿಗೆ ಬೇಕಾಗಿದ್ದ ನಾಲ್ವರು ಸರಗಳ್ಳರನ್ನು ಬೀದರ್ ನಗರದ ಗಾಂಧಿಗಂಜ್ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.ಮೈಕಲ್ ಕೊಡ್ಲಿಕರ್, ಉಮೇಶ್ ಭಾವಿದೊಡ್ಡಿ, ವಿನಯ್‍ಕುಮಾರ್ ಭಾವಿಕಟ್ಟಿ ಮತ್ತು ನಿಶಾಂತ್ ಬಂಧಿತ ಆರೋಪಿಗಳು. ಪೊಲೀಸರು ಬಂಧಿತರಿಂದ ಎರಡು ಪಲ್ಸರ್ ಬೈಕ್ ಹಾಗು 5.50 ಲಕ್ಷ ರೂ. ಬೆಲೆಬಾಳುವ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಬಂಧಿತರ ಮೇಲೆ ಸರಗಳ್ಳತನ ಪ್ರಕರಣಗಳು ದಾಖಲಾಗಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ನೇತೃತ್ವದಲ್ಲಿ ನಡೆದ ಕಾರ್ಯಚಾರಣೆ ಮಾಡಲಾಗಿತ್ತು. Sign in to your account
Username or Email Address


Password

 Remember Me


