ಕಲಬುರಗಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಿನ್ನಡೆಗೆ ರಾಹುಲ್ ಗಾಂಧಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅಂತಾ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನುಡಿದಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವು ಕಂಡಿದೆ. ಆದ್ರೆ ಕಾಂಗ್ರೆಸ್ ಹಿನ್ನಡೆಯಾಗಲು ರಾಹುಲ್ ಗಾಂಧಿ ಕಾರಣವಲ್ಲ. ಅವರ ನಾಯಕತ್ವ ಪಕ್ಷಕ್ಕೆ ಬೇಕೇ ಬೇಕು. ಅವರನ್ನು ಬಿಟ್ಟರೆ ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತೆ. ಸೋಲಿಗೆ ಎಲ್ಲಿ ತಪ್ಪಾಗಿದೆ ಗುರುತಿಸಿ ತಿದ್ದಿಕೊಳ್ಳುತ್ತೇವೆ. ಒಟ್ಟಿನಲ್ಲಿ ರಾಹುಲ್ ಗಾಂಧಿ ನಾಯಕತ್ವ ಮುಂದುವರೆಯಲಿದೆ ಅಂತಾ ಹೇಳಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಪಕ್ಷವನ್ನು ಮುಗಿಸಬಹುದು. ಆದ್ರೆ ರಾಜಕೀಯ ಮುಖಂಡರ ವೀರಾವೇಶದ ಮಾತಿನಿಂದ ಯಾವ ಪಕ್ಷವನ್ನೂ ಮುಗಿಸಲು ಸಾಧ್ಯವಿಲ್ಲ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದರು.ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತದಲ್ಲಿ ಕರ್ನಾಟಕದಲ್ಲಿರೋ ಕಾಂಗ್ರೆಸ್ ಅಳಿಸಿಹೋಗುತ್ತೆ: ಗೋ ಮಧುಸೂದನ್Sign in to your account
Username or Email Address


Password

 Remember Me


