ಚಾಮರಾಜನಗರ: ಆನೆಯೊಂದು ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಡೆದಿದೆ.ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಕೃಷ್ಣಯ್ಯನ ಕಟ್ಟೆ ಎಂಬಲ್ಲಿ ಆನೆ ಕೆಸರಿನಲ್ಲಿ ಸಿಲುಕಿಕೊಂಡಿತ್ತು. ಭೀಕರ ಬರಗಾಲದಿಂದ ಅಲ್ಪಸ್ವಲ್ಪ ನೀರಿದ್ದ ಕಾರಣ ಈ ಘಟನೆ ನಡೆದಿದೆ.ಇಂದು ಬೆಳಗ್ಗೆ ಆನೆಗಳು ನೀರು ಕುಡಿಯಲು ಬಂದಾಗ ಒಂದು ಆನೆ ಕೆಸರಿನಲ್ಲಿ ಸಿಕ್ಕಿಕೊಂಡಿತ್ತು. ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ಆನೆ ಕೆಸರಿನಲ್ಲಿ ಸಿಲುಕಿರುವ ದೃಶ್ಯ ಕಂಡು ಜೆಸಿಬಿ ಯಂತ್ರ ತರಿಸಿ ಆನೆಯನ್ನು ಮೇಲೆತ್ತಿ ರಕ್ಷಿಸಿದ್ದಾರೆ. Sign in to your account
Username or Email Address


Password

 Remember Me


