ಉಡುಪಿ: ಜಿಲ್ಲೆಯ ಪ್ರವಾಸಿ ತಾಣಗಳ ವೈಮಾನಿಕ ನೋಟವನ್ನು ತೋರಿಸುವ ಮೂಲಕ ಪ್ರವಾಸೋದ್ಯಮವನ್ನು ಆಕರ್ಷಿಸಲು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ವಿವಿಧ ತಾಣಗಳ ಡ್ರೋನ್ ಛಾಯಾಚಿತ್ರ ಪ್ರದರ್ಶನವನನ್ನು ಗ್ಯಾಲರಿ ಅದಿತಿ ಶನಿವಾರ ಆಯೋಜಿಸಿದೆ.ಪತ್ರಿಕಾ ಛಾಯಾಗ್ರಾಹಕರಾದ ಆಸ್ಟ್ರೋ ಮೋಹನ್ ಮತ್ತು ಬೆಂಗಳೂರಿನ ಅರುಣ್ ಮಹೇಂದ್ರಕರ್ ಈ ಹೊಸ ಪರಿಕಲ್ಪನೆಗೆ ನಾಂದಿ ಹಾಡಿದ್ದಾರೆ. ಉಡುಪಿಯ ಸುಮಾರು 57 ಚಿತ್ರಗಳನ್ನು ಗ್ಯಾಲರಿ ಅದಿತಿಯಲ್ಲಿ ಪ್ರದರ್ಶಿಸಲಾಗುವುದು. ಕಾಪು ದೀಪ ಸ್ತಂಭ, ಕಾರ್ಕಳದ ಬಾಹುಬಲಿ, ಸೆಂಟ್‍ಮೇರಿಸ್ ದ್ವೀಪ ಹಾಗೂ ಬಾರಕೂರು ಬಸದಿಗಳು ವಿಶೇಷ ಆಕರ್ಷಣೆಯಾಗಿವೆ. ಸೇಂಟ್ ಮೇರೀಸ್ ಅರಬ್ಬೀ ಸಮುದ , ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ಮಣಿಪಾಲ್ ಮುಂತಾದ ಸ್ಥಳಗಳನ್ನು ಬಾನಿನಿಂದ ನೋಡಿದಾಗ ಅದರ ಸೊಬಗು ಅತಿ ವಿಶಿಷ್ಟವಾಗಿದೆ.ಶನಿವಾರ ಸಂಜೆ ಆರು ಗಂಟೆಗೆ ಡ್ರೋನ್ ಫೋಟೋಗ್ರಫಿಯ ಪ್ರದರ್ಶನದ ಉದ್ಘಾಟನೆ ನಡೆಯಲಿದೆ. ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಸಂಧ್ಯಾ ಪೈ, ಉಡುಪಿ ಎಎಸ್‍ಪಿ ವಿಷ್ಣುವರ್ಧನ್ ಹಾಗೂ ಸಾಯಿ ರಾಧಾ ಸಮೂಹದ ಮುಖ್ಯಸ್ಥರಾದ ಮನೋಹರ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಕೋರಲಿದ್ದಾರೆ.ಅದಿತಿ ಗ್ಯಾಲರಿಗೆ ಬರುವ ಕಲಾ ರಸಿಕರಿಗೆ ಚಿತ್ರಗಳ ಪ್ರದರ್ಶನ ವೀಕ್ಷಿಸಲು ಮಾರ್ಚ್ 11 ರಂದು ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಮಾರ್ಚ್ 12, ಭಾನುವಾರ ಬೆಳಗ್ಗೆ 10 ರಿಂದ ರಾತ್ರಿ 8ರ ತನಕ ಕಲಾಸಕ್ತರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. Sign in to your account
Username or Email Address


Password

 Remember Me


