ತುಮಕೂರು: ರೆಸಿಡೆನ್ಸಿಯಲ್ ಶಾಲೆಯಲ್ಲಿ ಫುಡ್ ಪಾಯ್ಸನ್ ಆಗಿ ಮೂರು ಅಮಾಯಕ ಮಕ್ಕಳು ಪ್ರಾಣವನ್ನೇ ಕಳೆದುಕೊಂಡಿರೋ ಘಟನೆ ತುಮಕೂರಿನಲ್ಲಿ ನಡೆದಿದೆ.ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. 15 ವರ್ಷ ವಯಸ್ಸಿನವರಾದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಮೃತ ವಿದ್ಯಾರ್ಥಿಗಳು. ಫುಡ್ ಪಾಯ್ಸನ್‍ನಿಂದ ಮೂರು ಮಕ್ಕಳು ಸಾವನ್ನಪ್ಪಿದ್ರೆ ಇಬ್ಬರ ಸ್ಥಿತಿ ಗಂಭಿರವಾಗಿದೆ. ಈ ಬೋರ್ಡಿಂಗ್ ಶಾಲೆ ಬಿಜೆಪಿ ಮಾಜಿ ಶಾಸಕ ಕಿರಣ್‍ಕುಮಾರ್‍ಗೆ ಸೇರಿದ್ದು ಅಂತ ಗೊತ್ತಾಗಿದೆ.ಘಟನೆ ಬಗ್ಗೆ ಹುಳಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಘಟನೆ ಬಗ್ಗೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್ ಹೇಳಿಕೆ ನೀಡಿದ್ದು, ಊಟದಲ್ಲಿ ನೀಲಿ ಬಣ್ಣ ಕಾಣಿಸಿಕೊಂಡಿತ್ತು ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಮೂವರು ಮಕ್ಕಳು ಚಪಾತಿ ಪಲ್ಯಾ ಬದಲಿಗೆ ಅನ್ನ ಸಾಂಬರ್ ತಿಂದಿದ್ದಾರೆ. ಆಗ ಸಾಂಬರ್‍ನಲ್ಲಿ ವ್ಯತ್ಯಾಸ ಇದ್ದಿದ್ದು ಕಂಡು ಬಂತು. ನಂತರ ಅಲ್ಲಿದ್ದ ಉಳಿದ ಮಕ್ಕಳು ಯಾರು ಊಟ ಮಾಡಿರಲಿಲ್ಲ. ಅಸ್ವಸ್ಥರಾದ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ವೈದ್ಯರಿಂದ ಪರಿಶೀಲನೆ ನಡೆಸಲಾಗುತ್ತಿದೆ. ಮಕ್ಕಳಿಗೆ ಗ್ಲೂಕೋಸ್ ನೀಡಿ, ನಂತರ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಅಂತ ತಿಳಿಸಿದ್ರು.ಹಾಸ್ಟೆಲ್‍ನಲ್ಲಿ 40 ಮಂದಿ ವಿದ್ಯಾರ್ಥಿಗಳಿದ್ದಾರೆ. 3ನೇ ತರಗತಿಯಿಂದ 10ನೇ ತರಗತಿವರೆಗೆನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶ್ರೇಯಸ್ ಆಕಾಂಕ್ಷ್ ಪಲ್ಲಕ್ಕಿ ಶಿರಾಂಪುರ ವಿದ್ಯಾರ್ಥಿಗಳು. ಶಾಂತಮೂರ್ತಿ ತಿಮ್ಮನಹಳ್ಳಿ ವಿದ್ಯಾರ್ಥಿ. ಹಾಸ್ಟೆಲ್‍ನಲ್ಲಿ ಸಿಸಿ ಕ್ಯಾಮರಾಗಳಿವೆ, ಅದನ್ನ ಪರಿಶೀಲಿಸುತ್ತೇನೆ ಅಂತ ಕಿರಣ್ ಕುಮಾರ್ ಹೇಳಿದ್ದಾರೆ. Sign in to your account
Username or Email Address


Password

 Remember Me


