ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆನೆಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸುಮಾರು 70 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.ಕುಶಾಲನಗರ ಬಳಿಯ 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಆನೆಕಾಡು ಅರಣ್ಯ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಕಾಡಿನ ಸುತ್ತಮುತ್ತಲಿನ ರೈತರು ಕ್ಷಣಕಾಲ ಆತಂಕಕ್ಕೆ ಒಳಗಾಗಿದ್ದು, ಕಾಡಿನ ಸುತ್ತಮುತ್ತ ಒಣಗಿದ ಕುರುಚಲು ಗಿಡಗಳು, ಮರಗಳು ಒಣಗಿ ನಿಂತಿದ್ದರಿಂದ ಬೆಂಕಿ ರಭಸದಿಂದ ಹೊತ್ತಿ ಉರಿಯ ತೊಡಗಿದೆ.ಸ್ಥಳಕ್ಕೆ 60ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಈ ಬಾರಿ ಮಳೆಯಾಗದ ಕಾರಣ ಸಾಕಷ್ಟು ಮರಗಳು ಒಣಗಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಾಗಿದೆ.
 






 Advertisement 




 Sign in to your account
Username or Email Address


Password

 Remember Me


