ಚಾಮರಾಜನಗರ: ಕಳೆದ ಎಂಟು ದಿನಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಮೂರು ದಿನಗಳಿಂದ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಣಾ ಪ್ರದೇಶ ಅಕ್ಷರಶಃ ಬೆಂಕಿಯಿಂದ ಹೊತ್ತಿ ಉರಿದಿತ್ತು. ಇದೀಗ ಬೆಂಕಿಯನ್ನು ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.ಬೆಂಕಿ ಜ್ವಾಲೆಯ ನಡುವೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಗಲಿರುಳು ನಿದ್ದೆ, ಊಟವಿಲ್ಲದೇ ನಡೆಸಿದ ಕಾರ್ಯಚರಣೆಯ ಫಲವಾಗಿ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಹಚ್ಚಿದ್ದ ಬೆಂಕಿಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಅಲ್ಲದೇ ಅಲವಾರು ಪ್ರಾಣಿ ಸಂಕುಲ ಬೆಂಕಿಯ ಕಿನ್ನಾಲೆಗೆ ತುತ್ತಾಗಿವೆ.ಬಂಡೀಪುರದ ಕಲ್ಕರೆ, ಗುಂಡ್ರೆ, ಮದ್ದೂರು ಅರಣ್ಯ ಪ್ರದೇಶ ಹಾಗೂ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಣಾ ಪ್ರದೇಶದ ಮದಲೆಮಾವು, ಪುಣಜೂರು, ಬೆಡಗುಳಿ ಪ್ರದೇಶದಲ್ಲಿ ಬಿದ್ದಿದ್ದ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದೆ. Sign in to your account
Username or Email Address


Password

 Remember Me


