ಬೆಂಗಳೂರು: ನನ್ನನ್ನು ಸಚಿವ ಸ್ಥಾನದಿಂದ ತೆಗೆದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಮಲಿಂಗಾರೆಡ್ಡಿ, 4 ವರ್ಷ ಪೂರೈಸಿದ ಸಚಿವರನ್ನ ಸಚಿವ ಸಂಪುಟದಿಂದ ಕೈಬಿಡುವ ನಿರ್ಧಾರಕ್ಕೆ ರಾಮಲಿಂಗಾ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ರು. ನನ್ನ ಮೇಲೆ ಕಳಂಕ ಇಲ್ಲ. ಯಾವುದು ಬೇಡ ಅಂದ್ರೆ ರಾಜಕೀಯ ನಿವೃತ್ತಿ ಆಗ್ತೇನೆ ಅಂದ್ರು.ಪಕ್ಷದ ಕೆಲಸದ ಜೊತೆಗೆ ನಾವು ಸಚಿವರಾಗಿ ಕೆಲಸ ಮಾಡಿದ್ರೆ ಪಕ್ಷಕ್ಕೆ ಬಲ ಬರುತ್ತೆ. ನೀವು ಸಚಿವರಾಗಿ ಕೆಲಸ ಮಾಡಿದ್ದು ಸಾಕು ಅಂದ್ರೆ ಏನ್ ಮಾಡೊಕೆ ಆಗುತ್ತೆ. ಯಾವುದೂ ಬೇಡ ನೀವು ಹಿರಿಯರು ಅಂದ್ರೆ ರಾಜಕೀಯ ನಿವೃತ್ತಿ ಆಗ್ತೇನೆ ಅಂತ ಹೇಳಿದ್ರು.ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ ಕೊಟ್ಟಿರುವ ವಿಚಾರ ಒಂದೆಡೆ ಆದ್ರೆ, ಇದೀಗ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ತರಲು ಸಮನ್ವಯ ಸಮಿತಿ ಸಜ್ಜಾಗಿದೆ. ಭಾನುವಾರದಂದು ನಡೆಯಲಿರುವ 20 ಜನ ಸದಸ್ಯರಿರುವ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಹಿರಿಯ ಸಚಿವರಿಗೆ ಗೇಟ್ ಪಾಸ್ ನೀಡಲು ಮಹತ್ವದ ಚರ್ಚೆ ನಡೆಯಲಿದೆ.Sign in to your account
Username or Email Address


Password

 Remember Me


