ಮೈಸೂರು: ರಾಜ್ಯ ನಾಯಕರಿಂದ ಕಾಂಗ್ರೆಸ್ ಹೈಕಮಾಂಡ್‍ಗೆ ಕಪ್ಪ ವಿಚಾರ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.ಮಾಜಿ ಸಚಿವ ಎಸ್.ಎ.ರಾಮದಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.ಮೈಸೂರಿನಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಮುಖಂಡರಾದ ರಾಮದಾಸ್, ಎಂ.ಶಿವಣ್ಣ ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ. Sign in to your account
Username or Email Address


Password

 Remember Me


