ಬೆಂಗಳೂರು: ಸ್ಟಾಲಿನ್ (MK Stalin) ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ (Govinda Karajola) ಹೇಳಿದ್ದಾರೆ.ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ಯಿಂದ  ನಿನ್ನೆ ನೀರು ಬಿಡುವ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಂಗಳವಾರ ಬಂದ್ ಶಾಂತಿಯುತವಾಗಿ ಆಚರಿಸಲಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನೀರು ಬಿಡ್ತಿದೆ. ಸರ್ಕಾರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿದೆ. ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದರು.ತಮಿಳುನಾಡಿಗೆ 32 ಟಿಎಂಸಿ ಅಡಿ ನೀರು ಮಾತ್ರ 1.8 ಲಕ್ಷ ಹೆಕ್ಟೇರ್ ಬೆಳೆಗೆ ಹಂಚಿಕೆ ಆಗಿರೋದು. ಆದರೆ ಅವರು 4 ಲಕ್ಷ ಹೆಕ್ಟೇರ್ ಕುರುವೈ ಬೆಳೆ ಬೆಳೆದಿದ್ದಾರೆ. ಈಗಾಗಲೇ ಅಧಿಕ ನೀರು ಹರಿದು ಹೋಗಿದೆ. ಇದನ್ನು ನಮ್ಮವರು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕಡಿಮೆ ಮಳೆ ಆಗಿದೆ. ಬಿದ್ದ ಮಳೆ ಎಲ್ಲಕೆ ಆರೆಸ್ ಜಲಾಶಯಕ್ಕೇ ಹರಿದು ಬರಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರೇ ತಮಿಳುನಾಡಿಗೆ ಹೋಗಿ: ಸಿ.ಟಿ ರವಿ ಆಗ್ರಹಮಳೆ ಆಧಾರದಲ್ಲಿ ನೀರು ಹಂಚಿಕೆ ಮಾಡಿರೋದು ತಪ್ಪು ಅಂತ ಕೋರ್ಟ್‍ಗೆ ಮನವರಿಕೆ ಮಾಡಿ ಕೊಟ್ಟಿಲ್ಲ. ಇವರ ಪಾರ್ಟ್‍ನರ್ ಸ್ಟಾಲಿನ್ ಸರ್ಕಾರಕ್ಕೆ ಅನುಕೂಲ ಮಾಡಿಕೊಡಲು ನೀರು ಬಿಡುತ್ತಿದ್ದಾರೆ. ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಪ್ರೀತಿ ಅನ್ನೋ ನಡೆ ತೋರಿಸ್ತಿದೆ ಸರ್ಕಾರ. 3 ಸಾವಿರ ಕ್ಯೂಸೆಕ್ಸ್ ಅಲ್ಲ ಒಂದು ಹನಿಯನ್ನೂ ನೀರು ಬಿಡಬಾರದು. ಮೇಕೆದಾಟು ಪಾದಯಾತ್ರೆ ಮಾಡಿದವರು ಕಾಂಗ್ರೆಸ್‍ನವರು. ಮೇಕೆದಾಟು ಯೋಜನೆ ನಾವು ಅಧಿಕಾರಕ್ಕೆ ಬಂದು ಮಾಡ್ತೇವೆ ಅಂದಿದ್ರು ಡಿಕೆಶಿ, ಯಾರ ನೆರವೂ ಬೇಕಿಲ್ಲ ಅಂದಿದ್ರು. ಈಗ ಅವರದ್ದೇ ಸರ್ಕಾರ ಇದೆ ಮೇಕೆದಾಟು ಯೋಜನೆ ಮಾಡಲಿ. ಇವತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸ್ತಿದ್ದೇವೆ, ಆಗಿರುವ ಅನ್ಯಾಯವನ್ನು ಜನತೆಗೆ ತಿಳಿಸ್ತೇವೆ ಎಂದು ತಿಳಿಸಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


