– ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ರಹಸ್ಯ ಬಯಲುಬೆಂಗಳೂರು: ದರ್ಶನ್ (Darshan)& ಗ್ಯಾಂಗ್‍ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder case) ಹಂತಕರು ಇವರೇ ಎಂದು ಮಣ್ಣು ಸಹ ಬೊಟ್ಟು ಮಾಡಿ ತೋರಿಸಿದೆ ಎಂಬ ಅಂಶ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖವಾಗಿದೆಹೌದು, ಅಪರೂಪ ಎಂಬಂತೆ ಮಣ್ಣನ್ನು ಈ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಿದ್ದಾರೆ. ತನಿಖೆ ವೇಳೆ ಆರೋಪಿಗಳು ಧರಿಸಿದ್ದ ಶೂ ಮತ್ತು ಚಪ್ಪಲಿಯಲ್ಲಿದ್ದ ಮಣ್ಣನ್ನು ಹಾಗೂ ಶೆಡ್ ಬಳಿಯ ಮಣ್ಣನ್ನು ಪೊಲೀಸರು ಸಂಗ್ರಹಿಸಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಕಳಿಸಿ ವರದಿ ಪಡೆದಿದ್ದಾರೆ. ರಿಪೋರ್ಟ್‍ನಲ್ಲಿ ಆರೋಪಿಗಳು ಧರಿಸಿದ್ದ ಶೂ ಮತ್ತು ಚಪ್ಪಲಿಯಲ್ಲಿ ಇರುವ ಮಣ್ಣು ಹಾಗೂ ಶೆಡ್ ಬಳಿಯ ಮಣ್ಣು ಎರಡೂ ಒಂದೇ ಎಂದು ಕೃಷಿ ಅಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬುದನ್ನು ಪೊಲೀಸರು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿದ್ದಾರೆ.ಇದೀಗ ಶೂ ಹಾಗೂ ಚಪ್ಪಲಿಯಲ್ಲಿದ್ದ ಶೆಡ್‍ನಲ್ಲಿನ ಮಣ್ಣು ಸಹ `ಡಿ’ಗ್ಯಾಂಗ್‍ಗೆ ಕಂಟಕವಾಗಿ ಪರಿಣಮಿಸಿದೆ. ಚಾರ್ಜ್‍ಶೀಟ್‍ನಲ್ಲಿ ಮಣ್ಣಿನ ಅಂಶವನ್ನು ಪೊಲೀಸರು ಉಲ್ಲೇಖಿಸಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರ್ಶನ್, ವಿನಯ್, ರಾಘವೇಂದ್ರನ ಶೂ ಹಾಗೂ ನಾಗರಾಜ್‍ನ ಚಪ್ಪಲಿಗೆ ಅಂಟಿದ್ದ ಮಣ್ಣನ್ನ ಸಂಗ್ರಹ ಮಾಡಿದ್ದರು. ಇದೀಗ ದೇಶದಲ್ಲೇ ಮೊದಲ ಬಾರಿಗೆ ಮಣ್ಣಿನ ವರದಿ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಪ್ರಕರಣ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.Sign in to your account
Username or Email Address


Password

 Remember Me


