 ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೊಟ್ಟೂರು ಗುರು ಬಸವೇಶ್ವರ ರಥೋತ್ಸವ ವೇಳೆಯಲ್ಲಿ ಚಕ್ರದ ಅಚ್ಚು ಮರಿದು ರಥ ಮುಗುಚಿ ಬಿದ್ದಿದೆ.ಚಕ್ರದ ಅಚ್ಚು ಮುರಿದು 60 ಅಡಿ ಎತ್ತರದ ರಥ ಬಿದ್ದಿದೆ. ರಥದ ಕೆಳಗೆ 50 ಕ್ಕೂ ಹೆಚ್ಚು ಭಕ್ತಾದಿಗಳು ಸಿಲುಕಿರುವ ಶಂಕೆಯಿದ್ದು, ಪರಿಹಾರ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.ರಥದ ಕೆಳಗೆ ಸಿಲುಕಿರುವ ಭಕ್ತಾದಿಗಳನ್ನು ರಕ್ಷಿಸುವ ಕಾರ್ಯ ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಸಾಗಿದೆ. ರಥ ಕೆಳಗೆ ಸಿಲುಕಿರುವ ಭಕ್ತರ ನರಳಾಟ, ಚೀರಾಟ ಜೋರಾಗಿದೆ.ಪ್ರತಿ ವರ್ಷ ನಡೆಯುವ ಗುರು ಬಸವೇಶ್ವರ ರಥೋತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿದ್ದು, ಈ ವರ್ಷವೂ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು..   Sign in to your account
Username or Email Address


Password

 Remember Me


