ನವದೆಹಲಿ: ಡಿವೈಎಸ್‍ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಎರಡು ವಾರ ಕಾಲ ಸುಪ್ರೀಂ ಕೋರ್ಟ್ ಮುಂದೂಡಿದಿದೆ.ಇಂದು ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ಸಿಐಡಿ ವರದಿಯನ್ನು ಭಾಷಾಂತರ ಮಾಡುವ ನಿಟ್ಟಿನಲ್ಲಿ ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಜೊತೆಗೆ ಜೊತೆಗೆ ಅರ್ಜಿದಾರ ಕುಶಾಲಪ್ಪ ಪರ ವಕೀಲರು ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ನಾಲ್ಕು ವಾರಗಳ ಸಮಯ ನೀಡುವಂತೆ ಮನವಿ ಮಾಡಿದ್ದರು.ವಿಚಾರಣೆ ಆಲಿಸಿದ ನ್ಯಾ. ಆನಂದಕುನಾರ್ ಗೊಯೇಲ್ ಮತ್ತು ಉದಯ್ ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠ ಎರಡು ವಾರಗಳ ಅವಕಾಶ ನೀಡಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.ಏನಿದು ಪ್ರಕರಣ?
ಡಿವೈಎಸ್ಪಿ ಎಂಕೆ. ಗಣಪತಿ ಮಡಿಕೇರಿಯ ಲಾಡ್ಜ್‍ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್‍ಗೆ ಕ್ಲೀನ್ ಚೀಟ್ ನೀಡಿತ್ತು. ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲಿನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಗಣಪತಿ ತಂದೆ ಕುಶಾಲಪ್ಪ ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ಆದೇಶಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ   ಈ ಹಿಂದೆ ಸಿಬಿಐ ತನಿಖೆಗೆ ಆದೇಶಿಸುವಂತೆ ಎಂ.ಕೆ. ಕುಶಾಲಪ್ಪ ಹಾಗೂ ಸಹೋದರ ಎಂ.ಕೆ.ಮಾಚಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. Sign in to your account
Username or Email Address


Password

 Remember Me


