ಧಾರವಾಡ: ಕಳೆದ ಜೂನ್ 15 ರಂದು ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾದ ಧಾರವಾಡದ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ ಗೌಡನ ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.ಈ ವೇಳೆ ಧಾರವಾಡ ಜಿಲ್ಲಾ ಉಸ್ತವಾರಿ ಸಚಿವರೇ ಈ ಕೊಲೆಗೆ ಕಾರಣ ಎಂದು ಆರೋಪ ಮಾಡಿದ ಕೊಲೆಯಾದ ಯೋಗೀಶಗೌಡ ಪತ್ನಿ ಮಲ್ಲಮ್ಮ, ಕೊಲೆಗೆ ರಾಜಕೀಯ ದ್ವೇಷವೇ ಕಾರಣ ಎಂದು ಆರೋಪಿಸಿದರು. ಕೊಲೆಯ ಹಿಂದೆ ಜಮೀನು ವಿವಾದ ಎಂದು ಹೇಳಲಾಗುತ್ತಿದೆ. ಆದರೆ ಇದರಲ್ಲಿ ಯಾವುದೇ ಹುರುಳಿಲ್ಲ. ಈ ಕೊಲೆಹೆ ರಾಜಕೀಯ ಕಾರಣವಿದೆ ಹಾಗೂ ನಮಗೆ ಬೆದರಿಕೆ ಪತ್ರ ಬರುತ್ತಿದ್ದು, ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇನ್ನು ಪ್ರತಿಭಟನೆ ವೇಳೆ ಯೋಗೀಶ ಗೌಡ ಪತ್ನಿ ಮಲ್ಲಮ್ಮ ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆಯೂ ನಡೆಯಿತು. Sign in to your account
Username or Email Address


Password

 Remember Me


