ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್‍ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದ ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿ 45 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಕಾಲಿಯಾ ರಫೀಕ್ ಆರೋಪಿಯಾಗಿದ್ದು, ಮೂಲತಃ ಕೇರಳದ ಕಾಸರಗೋಡಿನ ಉಪ್ಪಳ ಗ್ರಾಮದ ನಿವಾಸಿ.ತಡರಾತ್ರಿ ಸ್ನೇಹಿತರ ಜೊತೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ರಫೀಕ್ ಕಾರಿಗೆ ಟಿಪ್ಪರ್‍ನಲ್ಲಿ ಡಿಕ್ಕಿ ಹೊಡೆದು, ಬಳಿಕ ತಲ್ವಾರ್‍ಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ರಫೀಕ್ ಮೇಲೆ ಫೈರಿಂಗ್ ಮಾಡಿದ್ದಾರೆ.ರಫೀಕ್ ಜೊತೆಯಿದ್ದ ಸ್ನೇಹಿತರ ಮೇಲೆಯೂ ತಲ್ವಾರಗಳಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಹಲ್ಲೆಗೊಳಗಾದ ರಫೀಕ್ ಸ್ನೇಹಿತರು ಬೆರಳಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಸ್ನೇಹಿತರು ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಉಪ್ಪಳದ ನೂರ್ ಅಲಿ ಹಾಗೂ ಐವರ ತಂಡ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.ಸ್ಥಳಕ್ಕೆ ಎಸಿಪಿ ಶೃತಿ, ಉಳ್ಳಾಲ ಇನ್ಸ್ ಪೆಕ್ಟರ್ ಗೋಪಿಕೃಷ್ಣ, ಮಂಗಳೂರು ಸಿಸಿಬಿ ಪೊಲೀಸ್, ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. Sign in to your account
Username or Email Address


Password

 Remember Me


