ಉಡುಪಿ: ಜಿಲ್ಲೆಯ ಪಡುಬಿದ್ರೆ ಹಾಗೂ ಸಾಸ್ತಾನ ಟೋಲ್ ಗೇಟ್ ಪ್ರತಿಭಟನೆಯ ಕಾವು ಏರಿದೆ. ಮುಂಜಾಗ್ರತಾ ಕ್ರಮವಾಗಿ ಹೆಜಮಾಡಿ ಹಾಗೂ ಕೋಟ ಟೋಲ್ ಗೇಟ್ ವ್ಯಾಪ್ತಿಯ 2 ಕಿಮಿ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.ಉಡುಪಿಯಲ್ಲಿ ಹೈವೇ ಕಾಮಗಾರಿ ಪೂರ್ಣಗೊಂಡಿಲ್ಲ. ಈ ನಡುವೆಯೇ ಟೋಲ್ ಸಂಗ್ರಹ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದರ ವಿರುದ್ಧ ಸ್ಥಳೀಯ ಹೋರಾಟಗಾರರು ಸಿಡಿದೆದ್ದಿದ್ದಾರೆ. ಪರಿಸ್ಥಿತಿ ಕೈಮೀರಬಹುದು ಎಂಬ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಉಡುಪಿ ಜಿಲ್ಲೆಯ ಪಡುಬಿದ್ರೆ ಠಾಣಾ ವ್ಯಾಪ್ತಿಯ ಸರಹದ್ದಿನ ಹೆಜಮಾಡಿ ಟೋಲ್ ಗೇಟ್ ಮತ್ತು ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನ ಗುಂಡ್ಮಿ ಟೋಲ್ ಗೇಟಿನಲ್ಲಿ ಫೆಬ್ರವರಿ 9 ರಿಂದ ಟೋಲ್ ಸಂಗ್ರಹ ಮಾಡಲು ಆರಂಭಿಸಿದ್ದು, ಈ ಸಂಬಂಧ ಪ್ರತಿಭಟನೆ, ಮುಷ್ಕರ, ಬಂದ್ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗವಾಗುವ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗುವ ಸಾಧ್ಯತೆಯಿರುವುದರಿಂದ ಉಡುಪಿ ಜಿಲ್ಲೆಯ ಪಡುಬಿದ್ರೆ ಠಾಣಾ ಸರಹದ್ದಿನ ಹೆಜಮಾಡಿ ಟೋಲ್ ಗೇಟ್ ನಲ್ಲಿ ಸೆಕ್ಷನ್ ಹಾಕಿರುವುದಾಗಿ ಹೇಳಿದ್ದಾರೆ.ಕುಂದಾಪುರ ಸಮೀಪದ ಸಾಸ್ತಾನ ಗುಂಡ್ಮಿ ಟೋಲ್ ಗೇಟಿನ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 10 ರ ಬೆಳಿಗ್ಗೆ 6 ರಿಂದ ಫೆಬ್ರವರಿ 15 ರ ಮಧ್ಯರಾತ್ರಿ 12 ಗಂಟೆಯವರಗೆ ಸೆಕ್ಷನ್ 144 ಅನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೆಗೊಳಿಸುವಂತೆ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ.ಜಿಲ್ಲಾಧಿಕಾರಿಗಳ ಮನವಿಯಂತೆ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಗೇಟ್ ಪ್ರದೇಶ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಸಾರ್ವಜನಿಕ ಆಸ್ತಿ ಕಾಪಾಡುವ ಅವಶ್ಯಕತೆ ಕಂಡು ಬಂದಿರುವುದರಿಂದ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಎಸ್.ಪಿ ಕೆ.ಟಿ ಬಾಲಕೃಷ್ಣ ಹೇಳಿದ್ದಾರೆ.    Sign in to your account
Username or Email Address


Password

 Remember Me


