ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಾಣದಕಟ್ಟೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಬಸವರಾಜ್ (42) ಮೇಲೆ ಗ್ಯಾಸ್ ಸಿಲಿಂಡರ್‍ಗಳು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದೇ ವೇಳೆ ಶಾಲೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರ ಮೇಲೆಯೂ ಗ್ಯಾಸ್ ಸಿಲಿಂಡರ್‍ಗಳು ಬಿದ್ದದರಿಂದ ಅಕ್ಷತಾ ಮತ್ತು ತನುಶ್ರೀ ಎಂಬ ಇಬ್ಬರು ಶಾಲಾ ಬಾಲಕಿಯರಿಗೆ ಗಂಭೀರ ಗಾಯಗಳಾಗಿವೆ. ಅಕ್ಷತಾಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮತ್ತು ತನುಶ್ರೀಯನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.ಬೆಳಗ್ಗೆ ಮಂಜು ಕವಿದಿದ್ದರಿಂದ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಲಾರಿ ಭದ್ರಾವತಿಯಿಂದ ಚನ್ನಗಿರಿ ಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚನ್ನಗಿರಿ ಠಾಣಾ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಲಾರಿಯಿಂದ ಬಿದ್ದ ಗ್ಯಾಸ್ ಸಿಲಿಂಡರ್‍ಗಳು ಲೀಕ್ ಆಗುತ್ತಿರುವುದರಿಂದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.     Sign in to your account
Username or Email Address


Password

 Remember Me


