ಮೈಸೂರು: ರಾಜಹಂಸ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರ ಕೈಗಳು ತುಂಡಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಗೋಳೂರು ಕ್ರಾಸ್ ಬಳಿ ನಡೆದಿದೆಇಂದು ಬೆಳಗಿನ ಜಾವ 4 ಗಂಟೆ ವೇಳೆಯಲ್ಲಿ ಈ ಅವಘಢ ಸಂಭವಿಸಿದೆ. ರಾಜಹಂಸ ಬಸ್ ಪಲ್ಟಿಯಾಗಿದ್ದರಿಂದ ಇಬ್ಬರ ಕೈ ತುಂಡಾಗಿದೆ. ನಾಲ್ವರ ಕೈ ಮೂಳೆ ಮುರಿತವಾಗಿದ್ದು, ಮತ್ತೊಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತದೆ.ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Sign in to your account
Username or Email Address


Password

 Remember Me


