ರಾಯಚೂರು: ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯರಮರಸ್ ಗ್ರಾಮದಲ್ಲಿ ಇಂದು ನಡೆದಿದೆ.ಯರಮರಸ್ ಗ್ರಾಮದ 30 ವರ್ಷದ ರಮೇಶ್ ಸಾವಿಗಿಡಾದ ವ್ಯಕ್ತಿ. ರಸ್ತೆ ಬದಿ ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ತಮಿಳುನಾಡು ಮೂಲದ ಲಾರಿ ಚಾಲಕ ಮುರುಗನ್ ನಿರ್ಲಕ್ಷ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.ರಾಯಚೂರು- ಹೈದ್ರಾಬಾದ್ ಮುಖ್ಯ ರಸ್ತೆ ಗ್ರಾಮದಲ್ಲಿ ಹಾದು ಹೋಗುವುದರಿಂದ ಲಾರಿ ಸೇರಿ ದೊಡ್ಡ ವಾಹನಗಳು ವೇಗವಾಗಿ ಚಲಿಸುವುದೇ ಇಲ್ಲಿ ಅಪಘಾತಗಳಿಗೆ ಕಾರಣವಾಗುತ್ತಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಚಾಲಕ ಮುರುಗನ್ ನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.Sign in to your account
Username or Email Address


Password

 Remember Me


