ಬೆಂಗಳೂರು: ಬೈಕಿಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಶ್ರೀನಗರ ಬಸ್ ಸ್ಟಾಪ್ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಜಯನಗರದ ಸುರಾನ ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಕೃಷ್ಣಪ್ಪ ಶೆಟ್ಟಿ ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ಶೆಟ್ಟಿ ಟಿವಿಎಸ್ ಬೈಕ್‍ನಲ್ಲಿ ಶ್ರೀನಗರದ ಕಡೆಯಿಂದ ಹನುಮಂತನಗರದ ಕಡೆ ತರೆಳುತಿದ್ದ ವೇಳೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ನ ಹಿಂಭಾಗದಲ್ಲಿ ಕುಳಿತಿದ್ದ ಭೈರಮ್ಮ ಅವರಿಗೆ ಗಾಯಗಳಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.ಸ್ಥಳಕ್ಕೆ ಬಸವನಗುಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.Sign in to your account
Username or Email Address


Password

 Remember Me


