ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಲಾಕಪ್ ಡೆತ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಠಾಣೆಗೆ ಬೆಂಕಿಹಚ್ಚಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ 25 ಮಂದಿ ದುಷ್ಕರ್ಮಿಗಳನ್ನ ಗದಗ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.ಈ ಗಲಾಟೆಯಲ್ಲಿ ಅಕ್ರಮ ಮರಳು ದಂಧೆಕೊರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 25 ಜನ ದುಷ್ಕರ್ಮಿಗಳನ್ನು ವಿಚಾರಣೆಗಾಗಿ ಕರೆತರಲಾಗಿದ್ದು, ವೀಡಿಯೋ ದೃಶ್ಯಗಳನ್ನ ನೋಡಿ ಇನ್ನುಳಿದ ಆರೋಪಿಗಳ ಬಂಧಿಸುವ ಕಾರ್ಯ ಇಂದು ನಡೆಯಲಿದೆ. ಈ ಮಧ್ಯೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಧ್ಯಾಹ್ನದವರೆಗೆ ನಿಷೇಧಾಜ್ಞೆ ಮುಂದುವರೆದಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಬಿಗಿ ಬಂದುಬಸ್ತ್ ಕಲ್ಪಿಸಲಾಗಿದೆ. ಎಸ್‍ಪಿ, ಡಿಎಸ್‍ಪಿ, ಸಿಪಿಐ, ಪಿಎಸ್‍ಐ, ಕೆ.ಎಸ್.ಆರ್.ಪಿ ಹಾಗೂ ಡಿಆರ್ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ.ಪಟ್ಟಣ್ಣದಲ್ಲಿ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಪ್ರಾರಂಭವಾಗಿವೆ. ಸ್ಥಳಕ್ಕೆ ಎಡಿಜಿಪಿ ರಾಘವೇಂದ್ರ ಔರಾಧಕರ್ ಭೇಟಿ ನೀಡಿ ಪರಿಶೀಲನೆ ಮಾಡುವ ಸಾಧ್ಯತೆಗಳಿವೆ.ಏನಿದು ಪ್ರಕರಣ?: ಅಕ್ರಮ ಮರಳುದಂಧೆ ಆರೋಪದ ಮೇಲೆ ಶಿವಾನಂದ ಗಾಣಿಗೇರ ಪೊಲೀಸರ ವಶದಲ್ಲಿದ್ದರು. ತೀವ್ರ ವಿಚಾರಣೆಯಲ್ಲಿದ್ದ ಶಿವಾನಂದ ಠಾಣೆಯಲ್ಲೇ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಶಿವಾನಂದ ಸಂಬಧಿಕರು ಪೊಲಿಸರು ಲಾಕಪ್ ಡೆತ್ ಮಾಡಿರುವುದಾಗಿ ಆರೋಪಿಸಿ ಭಾನುವಾರದಂದು ಠಾಣೆಗೆ ಬೆಂಕಿ ಹಚ್ಚಿದ್ದರು.Sign in to your account
Username or Email Address


Password

 Remember Me


