ಚೆನ್ನೈ: ಮಧುರೈ ಜಿಲ್ಲೆಯ ಅವನಿಪುರಂನಲ್ಲಿ ಇಂದು ಜಲ್ಲಿಕಟ್ಟು ಸ್ಪರ್ಧೆ ನಡೆದಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.ಸ್ಪರ್ಧೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.ಇಂದಿನ ಸ್ಪರ್ಧೆಯನ್ನು ಕಂದಾಯ ಸಚಿವ ಆರ್‍ಬಿ ಉದಯ ಕುಮಾರ್ ಮತ್ತು ಜಿಲ್ಲಾಧಿಕಾರಿ ವೀರರಾಘವ ರಾವ್ ಉದ್ಘಾಟಿಸಿದ್ದರು. ಇನ್ನು ಈ ಸ್ಫರ್ಧೆಯಲ್ಲಿ ಸುಮಾರು 600 ಗೂಳಿಗಳು ಭಾಗವಹಿಸಿದ್ದವು. ಹಾಗೆಯೇ ಈ ಆಚರಣೆಯನ್ನು ನೋಡಲೆಂದು ಸಾವಿರಾರು ಮಂದಿ ಜಮಾಯಿಸಿದ್ದರು.ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ತಂಡ, ಆಂಬ್ಯುಲೆನ್ಸ್‍ಗಳನ್ನು ನಿಯೋಜಿಸಲಾಗಿತ್ತು. ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಆಚರಿಸಲಾಗುತ್ತಿತ್ತು. ಆದ್ರೆ ಸುಪ್ರೀಂ ಕೋರ್ಟ್ ಆಚರಣೆಗೆ ತಡೆ ನೀಡಿದ್ದ ಹಿನ್ನೆಲೆಯಲ್ಲಿ ಈ ಬಾರಿ ಕ್ರೀಡೆ ಆಚರಿಸಲು ಸಾಧ್ಯವಾಗಿರಲಿಲ್ಲ.ಸಾವಿರಾರು ಜನರ ಪ್ರತಿಭಟನೆಯ ನಂತರ ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಆಚರಣೆಗೆ ಸುಗ್ರೀವಾಗ್ಞೆ ತಂದಿತ್ತು.Sign in to your account
Username or Email Address


Password

 Remember Me


