ಬೆಂಗಳೂರು: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ (Fraud Case) ಅಭಿನವ ಹಾಲಶ್ರೀ (Abhinava Halashree) ಸ್ವಾಮೀಜಿ ಅರೆಸ್ಟ್ ಬೆನ್ನಲ್ಲೇ, ಮೈಸೂರಿನ (Mysuru) ವಕೀಲರೊಬ್ಬರು (Lawyer) ಹಿರೇಹಡಗಲಿಯ ಮಠಕ್ಕೆ (Mutt) 56 ಲಕ್ಷ ರೂ. ಹಣ ತಂದಿಟ್ಟಿದ್ದಾರೆ. ಈ ಹಣದ ಮೂಲ ಯಾವುದು? ಎಲ್ಲಿಂದ ಬಂತು ಎನ್ನುವ ಬಗ್ಗೆ ವಕೀಲ ಪ್ರಣವ್ ಪ್ರಸಾದ್ ಡಿಸಿಪಿಯವರಿಗೆ (DCP) ಪತ್ರ ಬರೆದಿದ್ದಾರೆ.ಇಷ್ಟು ಮಾತ್ರವಲ್ಲದೇ ಹಣದ ಕುರಿತು ಪ್ರಣವ್ ಪ್ರಸಾದ್ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಡಿಸಿಪಿಯವರಿಗೆ ಪ್ರಣವ್ ಪ್ರಸಾದ್ ಬರೆದ ಪತ್ರದಲ್ಲಿ (Letter) ಮಠಕ್ಕೆ ಹಣ ಬಂದ ಬಗ್ಗೆ ಉಲ್ಲೇಖವಾಗಿದ್ದು, ಪತ್ರದಲ್ಲಿನ ಸಂಪೂರ್ಣ ಸಾರಾಂಶ ಇಲ್ಲಿದೆ. ಇದನ್ನೂ ಓದಿ: ಕಾಂತರಾಜು ವರದಿ ಸರ್ಕಾರ ಸ್ವೀಕಾರ ಮಾಡುತ್ತದೆ: ಶಿವರಾಜ್ ತಂಗಡಗಿಪತ್ರದಲ್ಲಿ ಏನಿದೆ?
ಪ್ರಣವ್ ಪುಸಾದ್ 53 ವರ್ಷ, ಆದ ನಾನು ಮೈಸೂರಿನನಲ್ಲಿ ನೆಲೆಸಿದ್ದು ವಕೀಲ ವೃತ್ತಿ ಮಾಡಿಕೊಂಡಿರುತ್ತೇನೆ. ಚೈತ್ರ ಕುಂದಾಪುರ ಪಕರಣದಲ್ಲಿ ಸುದ್ದಿಯಲ್ಲಿರುವ ಅಭಿನವ ಹಾಲಶ್ರೀ ಸ್ವಾಮಿಜಿಗಳು ನನಗೂ ಮತ್ತು ನನ್ನ ಕುಟುಂಬಸ್ಥರಿಗೂ ಪರಿಚಯವಿದ್ದು, ಕಳೆದ ಎಂಟು ತಿಂಗಳಿನಿಂದ ನಮ್ಮ ಒಡನಾಟದಲ್ಲಿ ಇದ್ದರು. ಇದನ್ನೂ ಓದಿ: ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕು: ರಾಜೂ ಗೌಡಇವರು ನಮ್ಮ ಮನೆಗೆ ಬರುವುದು, ಆಶೀರ್ವಚನ ನೀಡುವುದು, ಪ್ರಸಾದ ಸ್ವೀಕರಿಸುವುದು ಮಾಡುತ್ತಾ ಬಂದಿದ್ದರು. ಹೀಗಾಗಿ ಇವರ ಬಗ್ಗೆ ನನಗೆ ವಿಶ್ವಾಸ ಹಾಗೂ ಗೌರವ ಇತ್ತು. ಇವರು ನಿಜವಾದ ಧರ್ಮಭೀರು ಸ್ವಾಮೀಜಿ ಎಂದು ನಾವು ಇದುವರೆಗೆ ನಂಬಿದ್ದೆವು. ಆದರೆ, ಮಾಧ್ಯಮಗಳಲ್ಲಿ ವರದಿಯಾದ ವಿಚಾರ ನೋಡಿ ನಮಗೆ ಆಘಾತವಾಯಿತು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ಸದಾ ಸ್ವಾಮೀಜಿಯ ಜೊತೆಗೆ ನಮ್ಮ ಮನೆಗೆ ಬರುತ್ತಿದ್ದ ಚಾಲಕ ರಾಜು ಎಂಬಾತ ನಾಲ್ಕು ದಿನಗಳ ಹಿಂದೆ ನಮ್ಮ ಕಚೇರಿಗೆ ಬಂದಿದ್ದ. ಅಂದು ಅವನು ಒಂದು ಬ್ಯಾಗನ್ನು ಬಿಟ್ಟು ಹೋಗಿದ್ದ. ಯಾವುದೋ ಲಗೇಜ್ ಇರಬೇಕೆಂದು ನಾವು ಸುಮ್ಮನಾಗಿದ್ದೆವು. ಇದನ್ನೂ ಓದಿ: ಶಿವಕುಮಾರ್ ಒಬ್ಬ ನೀರಿನ ಕಳ್ಳ, ಆಯೋಗ್ಯ: ಈಶ್ವರಪ್ಪ ಕಿಡಿಅದಾದ ನಂತರ ಕರೆ ಮಾಡಿದ ಚಾಲಕ ರಾಜು, ಆ ಬ್ಯಾಗನ್ನು ಮೈಸೂರಿನ ಯಾರಿಗೋ ಕೊಡಲು ಹೇಳಿದ್ದರು. ಜೊತೆಗೆ ವಕೀಲರಿಗೆ ಒಂದಷ್ಟು ಬ್ಯಾಗ್ ತಲುಪಿಸಲು ಹೇಳಿದ್ದರು. ಆದರೆ ಆ ವಕೀಲರು ನನಗೆ ಸಿಗದ ಕಾರಣ ಆ ಬ್ಯಾಗನ್ನು ನಿಮ್ಮ ಕಚೇರಿಯಲ್ಲಿ ಇಟ್ಟಿದ್ದೇನೆ ಎಂದರು. ಕೂಡಲೇ ಅವನನ್ನು ಗದರಿಸಿ ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಸೂಚನೆ ಕೊಟ್ಟೆ. ಅದಾದ ನಂತರ ಆ ಬ್ಯಾಗ್‌ನಿಂದ ನಾಲ್ಕು ಲಕ್ಷ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೇನೆ. ಉಳಿದ ಹಣವನ್ನು ದಯಮಾಡಿ ನಮ್ಮ ಮಠದ ಪೂಜಾರಿ ಹಾಲಸ್ವಾಮಿಯವರಿಗೆ ತಲುಪಿಸಿ ಎಂದು ಸ್ವಾಮೀಜಿಯವರು ಹೇಳಿದ್ದಾರೆ ಎಂದು ಹೇಳಿದ. ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಅವರಿಗೆ ಹಲವು ಬಾರಿ ಹೇಳಿದ. ಮೂರ್ನಾಲ್ಕು ದಿನವಾದರೂ ಅವರು ಯಾರು ಈ ಕಡೆ ತಲೆಹಾಕಲಿಲ್ಲ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿಸ್ವಾಮೀಜಿ ಹೇಳಿದಂತೆ ಮಠದಲ್ಲಿ ಹಾಲಸ್ವಾಮಿ ಎಮಬವರಿಗೆ ಈ ಹಣವನ್ನು ಇಂದು ಬೆಳಗ್ಗೆ ತಲುಪಿಸಿ ಬಂದಿರುತ್ತೇನೆ. ಈ ಸ್ವಾಮೀಜಿಯವರ ವ್ಯವಹಾರಗಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ತಮ್ಮ ಗಮನಕ್ಕೆ ಈ ವಿಚಾರಗಳನ್ನು ತರುತ್ತಿದ್ದು, ಈ ವಿಚಾರಗಳು ಮುಂದಿನ ತನಿಖೆಗೆ ಅನುಕೂಲವಾಗುವುದು ಎಂಬ ಉದ್ದೇಶದಿಂದ ಹಂಚಿಕೊಳ್ಳುತ್ತಿದ್ದೇನೆ. ನನಗೆ ಜೀವ ಭಯವಿದ್ದು ರಕ್ಷಣೆ ನೀಡಬೇಕೆಂದು ಡಿಸಿಪಿಯವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


