ಯಾದಗಿರಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ (Congress Govt) 3 ಡಿಸಿಎಂ ಸ್ಥಾನದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.ರಾಜ್ಯದಲ್ಲಿ 3 ಡಿಸಿಎಂ ಹುದ್ದೆ ಸೃಷ್ಠಿ ಮಾಡಿದ್ರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Loksabha Election) ಗೆಲುವು ಸುಲಭವಾಗುತ್ತದೆ ಎನ್ನುವುದು ಸಚಿವ ಕೆ. ಎನ್. ರಾಜಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ (Yadagiri) ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿದ್ದಾರೆ. ಯಾರನ್ನು ಡಿಸಿಎಂ ಮಾಡಬೇಕು ಎನ್ನುವ ಕುರಿತು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.ಎಲ್ಲಾ ಸಮಾಜದಲ್ಲಿ ಕೇಳೋರು ಇರ್ತಾರೆ ಅದು ತಪ್ಪಲ್ಲ. ಕೊಡೋದು ಬಿಡೋದು ಹೈಕಮಾಂಡ್‍ಗೆ ಬಿಟ್ಟ ವಿಚಾರವಾಗಿದೆ. ಎಲ್ಲಾ ಸಮಾಜದಮರಿಗೂ ಮುಖ್ಯಮಂತ್ರಿ ಆಗುವ ಆಸೆ ಇರುತ್ತೆ. ಆದರೆ ಸಿಎಂ ಸ್ಥಾನ ಒಂದು ಮಾತ್ರ ಇರೋದು ಅದು ಭರ್ತಿಯಾಗಿದೆ. ಒಂದು ಸಮಾಜಕ್ಕೆ ಡಿಸಿಎಂ ಸ್ಥಾನ ಕೊಟ್ರೆ ನಾವು ಲೋಕ ಸಭೆ ಚುನಾವಣೆ ಗೆಲ್ಲೋಕಾಗಲ್ಲ, ಎಲ್ಲ ಸಮಾಜದವರು ಮನಸ್ಸು ಮಾಡಿದ್ರೆ ಮಾತ್ರ ಗೆಲ್ಲುಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರಕೆ. ರಾಜಣ್ಣ ಹೇಳಿದ್ದರಲ್ಲಿ ತಪ್ಪೇನಿಲ್ಲ, ದೇಶದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ. ಮೊದಲೆಲ್ಲ ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಠಿಯಾಗಿದ್ದು, ಕಣ್ಣಮುಂದೆ ಇದೆ. ಎಲ್ಲಾ ಶಾಸಕರ ಅಭಿಪ್ರಾಯ ಪಡೆದು, ಈಗಾಗಲೇ ನಮ್ಮ ನಾಯಕರು ಡಿಸಿಎಂ ಹುದ್ದೆಯನ್ನು ಸೃಷ್ಠಿ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆದಮೇಲೆ ರಾಜ್ಯಕ್ಕೆ ಎಲ್ಲ ಒಳ್ಳೆಯದು ಆಗಿದೆ ಎಂದು ಸಿಎಂ ಪರ ಸಚಿವ ದರ್ಶನಾಪುರ ಬ್ಯಾಟ್ ಬೀಸಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


