ಬೆಂಗಳೂರು: ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ (Chaithra Kundapura) ಮತ್ತು ತಂಡ 5 ಕೋಟಿ ರೂ. ವಂಚಿಸಿ (Fraud) ಇದೀಗ ಬಂಧನಕ್ಕೊಳಗಾಗಿದ್ದಾರೆ. ಈ ಕುರಿತು ಸಿಸಿಬಿ (CCB) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದುವರೆಗೂ 3 ಕೋಟಿ ರೂ. ಮೌಲ್ಯದಷ್ಟು ನಗದು ಮತ್ತು ಚಿನ್ನವನ್ನು ಜಪ್ತಿಪಡಿಸಿಕೊಂಡಿದ್ದಾರೆ.ಯಾರಿಂದ ಎಷ್ಟು ಜಪ್ತಿ?: ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ 1.8 ಕೋಟಿ ರೂ. ಠೇವಣಿ ಇಟ್ಟಿದ್ದು, ಸಿಸಿಬಿ ಅಧಿಕಾರಿಗಳು ಈ ಹಣವನ್ನು ಜಪ್ತಿಪಡಿಸಿಕೊಂಡಿದ್ದಾರೆ. ಅಲ್ಲದೇ ಚೈತ್ರಾ ಮನೆಯಲ್ಲಿದ್ದ 65 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಸಹಾ ಜಪ್ತಿ ಮಾಡಿದ್ದಾರೆ. ಉಪ್ಪೂರು ಶ್ರೀರಾಮ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಚೈತ್ರಾ ಕುಂದಾಪುರ ಬಾವ ಮ್ಯಾನೇಜರ್ ಆಗಿದ್ದರು. ಅವರ ಸಹಾಯದ ಮೂಲಕ ಶ್ರೀರಾಮ್ ಬ್ಯಾಂಕ್‌ನಲ್ಲಿ ಚೈತ್ರಾ 40 ಲಕ್ಷ ರೂ. ಹಣವನ್ನು ಇಟ್ಟಿದ್ದಳು. ಈ ಹಣವನ್ನೂ ಅಧಿಕಾರಿಗಳು ವಶಕ್ಕೆ ಪಡಿದಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿಚೈತ್ರಾಳ ಗೆಳೆಯ ಶ್ರೀಕಾಂತ್ ನಾಯಕ್ (Shrikanth Nayak) ಖಾತೆಯಲ್ಲಿದ್ದ 45 ಲಕ್ಷ ರೂ. ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಈಗಾಗಲೇ 50 ಲಕ್ಷ ರೂ. ನಗದನ್ನು ಗೋವಿಂದ ಪೂಜಾರಿಗೆ (Govinda Babu Poojari) ಹಿಂದಿರುಗಿಸಿದ್ದಾರೆ. ಸದ್ಯ ಚೈತ್ರಾ ಖರೀದಿ ಮಾಡಿದ್ದ ಕಿಯಾ ಕಾರನ್ನು ಸಿಸಿಬಿ ವಶಕ್ಕೆ ಪಡೆದಿದೆ. ಸುಮಾರು 3.30 ಕೋಟಿ ರೂ. ಮೌಲ್ಯದ ಕಾರು, ಚಿನ್ನಾಭರಣ ಹಾಗೂ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಉಳಿದ ಹಣಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಾಟಿಂಗ್ ವಿಚಾರದಲ್ಲಿ ಗಲಾಟೆ – ಯುವತಿ ಅನುಮಾನಾಸ್ಪದ ಸಾವುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


