ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟಿ ಕೋಟಿ ವಂಚಿಸಿರುವ (Fraud Case) ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್ ವಿರುದ್ಧದ ತನಿಖೆ ಚುರುಕುಗೊಂಡಿದೆ. ತನಿಖಾಧಿಕಾರಿಗಳು ಪ್ರಕರಣ ನಡೆದ ಸ್ಥಳಗಳ ಮಹಜರು ನಡೆಸಿದ್ದಾರೆ.ಈಗಾಗಲೇ ಮಂಗಳೂರಿಗೆ (Mangaluru) ತೆರಳಿರುವ ಅಧಿಕಾರಿಗಳು ಮೂರು ಸ್ಥಳಗಳಲ್ಲಿ ಮಹಜರು ನಡೆಸಲಿದ್ದಾರೆ. ಉದ್ಯಮಿಯನ್ನು ಭೇಟಿಯಾದ ಜಾಗ, ಮಾತುಕತೆ ನಡೆದ ಜಾಗ ಹಾಗೂ ಹಣ ಪಡೆದ ಜಾಗಗಳ ಮಹಜರು ನಡೆಯಲಿದೆ. ಈಗಾಗಲೇ ವಂಚಕರ ಗ್ಯಾಂಗ್ ಉದ್ಯಮಿಯನ್ನು ಭೇಟಿಯಾದ ಬೆಂಗಳೂರಿನ ನಾರಾಯಣ ಗುರು ಕೋ ಅಪರೇಟಿವ್ ಬ್ಯಾಂಕ್, ಗೋವಿಂದ ಬಾಬು ಕಚೇರಿ ಹಾಗೂ ಕುಮಾರ ಕೃಪಾದಲ್ಲಿ ಸಿಸಿಬಿ ಪೊಲೀಸರು ಮಹಜರು ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಒಂದಷ್ಟು ದಾಖಲೆಗಳ ಮಾಹಿತಿಯನ್ನು ಸಿಸಿಬಿ ಪೊಲೀಸರು (CCB) ಕಲೆಹಾಕಿದ್ದರು. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ಮಾದರಿಯಲ್ಲೇ ಮತ್ತೊಂದು ಪ್ರಕರಣ – ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆಕುಮಾರ ಕೃಪಾದಲ್ಲಿ ಆರೋಪಿಗಳು ಚೆನ್ನನಾಯ್ಕ್ ಹೆಸರಲ್ಲಿ ನಕಲಿ ಪಾತ್ರಧಾರಿಯನ್ನು ಸೃಷ್ಟಿಸಿ ನಾಟಕವಾಡಿದ್ದರು. ಈ ವೇಳೆ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಬಂದಿದ್ದಾರೆ ಎಂದು ಕತೆ ಹೆಣೆದಿದ್ದರು. ಈಗ ತನಿಖೆ ಚುರುಕುಗೊಂಡಿದ್ದು ಮತ್ತಷ್ಟು ಮಹತ್ವದ ಮಾಹಿತಿಗಳು ಸಂಗ್ರಹದ ಬಳಿಕ ಪ್ರಕರಣದ ಮತ್ತಷ್ಟು ವಿಚಾರಗಳು ಬೆಳಕಿಗೆ ಬರಲಿವೆ.ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು ಸೆಕ್ಷನ್ ದಾಖಲಾಗಿದೆ. ಬಂಡೆಪಾಳ್ಯ ಠಾಣೆಯಲ್ಲಿ ಸಿಸಿಬಿ ಪೊಲೀಸರು ಐಪಿಸಿ ಸೆಕ್ಷನ್ 201ನ್ನು ಹೊಸದಾಗಿ ಸೇರಿಸಿದ್ದಾರೆ. ಸಿಸಿಬಿ ತನಿಖೆ ವೇಳೆ ಚೈತ್ರಾ ಹಾಗೂ ಗೆಳೆಯ ಆರೋಪಿ ಶ್ರೀಕಾಂತ್ ಕಳ್ಳಾಟ ಬಯಲಾಗಿದ್ದು, ಶ್ರೀಕಾಂತ್ ಮೊಬೈಲ್ ಸಂಪೂರ್ಣ ನಾಶ ಮಾಡಲಾಗಿದೆ ಎಂಬ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಚೈತ್ರಾ ಗೆಳೆಯ ಶ್ರೀಕಾಂತ್‌ ವಿರುದ್ಧದ ಕೇಸ್‌ಗೆ ಮತ್ತೊಂದು ಸೆಕ್ಷನ್‌ ದಾಖಲುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


