ಬೆಂಗಳೂರು: ಬಿಜೆಪಿ (BJP) ಅವರು ಬರ ವಿಚಾರಕ್ಕೆ ಸಿದ್ದರಾಮಯ್ಯ ಫೋಟೋ ಹಾಕುವ ಬದಲು ಮೋದಿ (Narendra Modi) ಬಳಿ ಹೋಗಿ ಬರ (Draught) ಪರಿಹಾರ ಕೇಳಲಿ ಅಂತ ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvarayaswamy) ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ ಭಾವಚಿತ್ರದಲ್ಲಿ ಬರ ಮೂಡಿಸಿರುವ ಬಿಜೆಪಿ ಟ್ವೀಟ್ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರಿಗೆ ಭಯ ಬಂದಿದೆ. ಪಾರ್ಲಿಮೆಂಟ್ ಚುನಾವಣೆ ಎದುರಿಸಲು ಆಗುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಬಗ್ಗೆ ಮಾತನಾಡುತ್ತಿದ್ದಾರೆ. ಬರಗಾಲ ಯಾರಾದರೂ ಹೇಳಿ ಕೇಳಿ ಕರೆಯಲು ಸಾಧ್ಯವಾ? ಸಂಸ್ಕಾರವಿಲ್ಲದೆ ಮಾತಾಡ್ತಿದ್ದಾರೆ ಅಂತ ಕಿಡಿಕಾರಿದರು.ಕರ್ನಾಟಕದಲ್ಲಿ ಹಿಂದೆಂದಿಗಿಂತಲೂ ಕಂಡು ಕೇಳರಿಯದ ಬರ ಆವರಿಸಿಕೊಂಡಿದೆ. @siddaramaiah ಸಾಹೇಬರು ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ವಾರದಿಂದಲೇ ಮುಂಗಾರು ಕೈಕೊಟ್ಟು ಬರಗಾಲ ಸೃಷ್ಟಿಯಾಗಿತ್ತು. ಆದರೆ, ವರ್ಗಾವಣೆ ದಂಧೆ, ಕಮಿಷನ್, ಕಲೆಕ್ಷನ್, ಶ್ಯಾಡೋ ಸಿಎಂ, ಸಚಿವರ ದರ್ಪದ ಮೇಲಾಟಗಳೇ ಹೆಚ್ಚಾದ ಹಿನ್ನೆಲೆ ಸರ್ಕಾರ ಈಗ ಧೃತರಾಷ್ಟ್ರನಂತೆ… pic.twitter.com/uUo0ZghSBD— BJP Karnataka (@BJP4Karnataka) September 14, 2023ಮೋದಿ ಅವರು ರಾಜ್ಯಕ್ಕೆ ಬಂದಾಗ ವಿಶ್ ಮಾಡದೆ ಹೋಗಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ನಮ್ಮನ್ನ ದೆಹಲಿಗೆ ಕರೆಯುತ್ತಾರೆ ಎಂದುಕೊಂಡಿದ್ದಾರೆ. ನಾಲ್ಕು ತಿಂಗಳಾದ್ರೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಜೆಡಿಎಸ್‌ ಜೊತೆ ಹೋಗ್ತಿದ್ದಾರೆ ಅಂತ ಟೀಕಿಸಿದರು.   ಇದನ್ನೂ ಓದಿ: ಮುಜರಾಯಿ ಇಲಾಖೆ ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧಸಿದ್ದರಾಮಯ್ಯ ಗ್ಯಾರಂಟಿಗಳಿಗೆ ಅಲೋಕೇಷನ್ ಕೊಡ್ತಿದ್ದಾರೆ. ಅದರ ಜೊತೆ ಬೇರೆ ಕೆಲಸಗಳೂ ನಡೆಯುತ್ತಿದೆ.196 ತಾಲೂಕು ಬರ ಅಂತ ಘೋಷಣೆ ಮಾಡಲಾಗಿದೆ. 34 ತಾಲೂಕು ಮಾರ್ಗಸೂಚಿ ವ್ಯಾಪ್ತಿ ಒಳಗಡೆ ಬರುತ್ತಿಲ್ಲ. ಅದನ್ನು ಮಾರ್ಗಸೂಚಿಯ ಒಳಗಡೆ ತಂದು ಬರ ಎಂದು ಘೋಷಣೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ರೈತರಿಗೆ ಐದು ಲಕ್ಷ ರೂ. ಬಡ್ಡಿ ರಹಿತ ಸಾಲ ಕೊಡ್ತಿದ್ದೇವೆ. ಹಾಲು ದರ ಏರಿಸಿ ರೈತರಿಗೆ ಕೊಡಲಾಗ್ತಿದೆ.ಇದನ್ನೆಲ್ಲಾ ಸಿದ್ದರಾಮಯ್ಯ ತಾನೆ ಮಾಡಿದ್ದು ಅಂತ ಬಿಜೆಪಿಗೆ ಸಚಿವ ಚೆಲುವರಾಯಸ್ವಾಮಿ ತಿರುಗೇಟು ಕೊಟ್ಟರು.ಬರ ಪರಿಹಾರ ನೀಡುವಂತೆ ವಿಪಕ್ಷಗಳ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬರ ಪರಿಹಾರ ಸುಮ್ಮನೆ ಮಾಡಲು ಆಗಲ್ಲ.ಅದಕ್ಕಾಗಿ ಸರ್ವೆ ಮಾಡಬೇಕು. ಸರ್ವೆ ಮಾಡಿ ಎಷ್ಟು ಅಂತ ಅಂದಾಜು ಮಾಡಿದ ಬಳಿಕ ಪರಿಹಾರ ನೀಡಬೇಕು. ಕೇಂದ್ರ ಮತ್ತು ರಾಜ್ಯ ಎರಡರಿಂದಲೂ ಪರಿಹಾರ ಆಗಬೇಕು. ಸಿದ್ದರಾಮಯ್ಯ ಅವರ ಬರ ಫೋಟೋ ಹಾಕಿದಾರಲ್ಲ ಬಿಜೆಪಿ ಅವರು ಹೋಗಲಿ. ಕೇಂದ್ರದ ಬಳಿ ಪರಿಹಾರ ಕೇಳಲಿ ಅಂತ ಗುಡುಗಿದರು.ಮಾರ್ಗಸೂಚಿ ಮಾಡಿ ಪರಿಹಾರ ನೀಡಬೇಕು. 25 ಜನ ಎಂಪಿ ಇದ್ದಾರೆ. ಒಬ್ಬರೂ ಬರದ ಬಗ್ಗೆ ಮಾತನಾಡುತ್ತಿಲ್ಲ. ಮೋದಿ ಬಳಿಯಾದ್ರೂ ಹೋಗಿ ಮಾತಾಡಲಿ ಅಂತ ಬಿಜೆಪಿ ನಾಯಕರ ವಿರುದ್ಧ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


