ಮೈಸೂರು: ಇಲ್ಲಿನ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದ ಸಂಸದ ಪ್ರತಾಪ್ ಸಿಂಹ ಜೆಡಿಎಸ್ ವರಿಷ್ಟರಾದ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ, ಮಂಡಿಯೂರಿ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ.ಈ ಬಾರಿ ಲೋಕಸಭಾ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತವಾಗಿ ದೊಡ್ಡಗೌಡರೇ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಮೈಸೂರಿನ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಂಸದ ಪ್ರತಾಪ್ ಸಿಂಹ ಸಹ ಭೇಟಿಯಾಗಿ ದೊಡ್ಡಗೌಡರ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ: ಕನ್ನಡ ಚಿತ್ರರಂಗ ದಿಕ್ಕು ತಪ್ಪಿಹೋಗಿದೆ, ಪ್ಯಾನ್ ಇಂಡಿಯಾ ವ್ಯಾಪಾರದ ಸೋಗು ಬಂದಿದೆ – ಹಂಸಲೇಖ ವಿಷಾದಈ ಕುರಿತ ಚಿತ್ರಗಳು ಇದೀಗ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳನ್ನೂ ಹುಟ್ಟುಹಾಕಿದೆ. ಈಗಾಗಲೇ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿನ ಲೆಕ್ಕಾಚಾರ ಹಾಕಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಇದನ್ನೂ ಓದಿ: One Nation One Election: ಸಂವಿಧಾನದ 5 ಆರ್ಟಿಕಲ್‌ಗಳಿಗೆ ಮಾಡಬೇಕಾಗುತ್ತೆ ತಿದ್ದುಪಡಿಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಾಜಿ ಸಿಎಂ ಕುಮಾರಸ್ವಾಮಿ ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಕುಮಾರಸ್ವಾಮಿ ಮಂಡ್ಯ ಇಲ್ಲವೇ ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ರಣತಂತ್ರ ರೂಪಿಸ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಯಾರೇ ಕಣಕ್ಕಿಳಿದರೂ ಒಗ್ಗಟ್ಟಿನಿಂದ ಎದುರಿಸುವುದು, ಒಂದೊಮ್ಮೆ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ರೆ ನಟಿ ರಮ್ಯಾ ಅವರನ್ನ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲ್ಯಾನ್‌ ಮಾಡುತ್ತಿದೆ. ಶಿವಮೊಗ್ಗದಲ್ಲಿ ಆಪರೇಷನ್ ಹಸ್ತದ ಮೂಲಕ ಕುಮಾರ್ ಬಂಗಾರಪ್ಪ ಸೆಳೆಯಲು ಕೈಪಡೆ ಮುಂದಾಗಿದೆ.ಈ ಮಧ್ಯೆ, ಇಂದು ಪದ್ಮನಾಭನಗರದ ಆರ್. ಅಶೋಕ್ ಆಪ್ತರು ಸಾರಿಗೆ ಸಚಿವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಶುಕ್ರವಾರ 8ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ಈ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಆದ್ರೆ, ಅವ್ರೇ ಸ್ವಇಚ್ಛೆಯಿಂದ ಬರ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


