ಬೆಂಗಳೂರು: ತಮಿಳುನಾಡಿಗೆ (TamilNadu) ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ (CWRC) ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ (Karnataka Government) ಇಕ್ಕಟ್ಟಿಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇಂದು ವಿಶೇಷ ಸರ್ವಪಕ್ಷ ಸಭೆ (All Party Meeting) ಕರೆದಿದೆ.ಸಿಎಂ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ. ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಸಿಎಂಗಳಿಗೆ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಮಾಡದಿರುವ ಸಂಬಂಧ ಸಭೆಯಲ್ಲಿ ಎಲ್ಲರೂ ಸೇರಿ ತೀರ್ಮಾನ ಮಾಡಲಿದ್ದಾರೆ. ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಇದೆ.ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ದೆಹಲಿಗೆ ತೆರಳಲಿದ್ದು, ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


