ಯಾದಗಿರಿ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಕುಟುಂಬಗಳ ನಡುವೆ ಬಡಿದಾಟದಿಂದ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಗನೂರು ಗ್ರಾಮದಲ್ಲಿ ನಡೆದಿದೆ.ನಗನೂರು ಗ್ರಾಮದ ಬಸವರಾಜ್ ಹಾಗೂ ಸದಾಶಿವ ಗಂಭೀರ ಗಾಯಗೊಂಡವರು. ಬಸವರಾಜ್ ಹಾಗೂ ಸದಾಶಿವ ಇಬ್ಬರೂ ಎತ್ತಿನ ಬಂಡಿ ಮೇಲೆ ಜಮೀನಿಗೆ ತೆರಳುತ್ತಿದ್ದಾಗ ಮೈಲಾರಿ, ಮುದಕಪ್ಪ, ಯಲ್ಲಪ್ಪ, ಸೇರಿ 9 ಜನರಿಂದ ಮಾರಣಾಂತಿಕ ಹಲ್ಲೆ ನಡೆದಿದೆ.ಗಲಾಟೆ ಯಾಕೆ..?: ಬಸವರಾಜಣ್ಣ, ಸದಾಶಿವ ಎತ್ತಿನ ಬಂಡಿಯಲ್ಲಿ ಜಮೀನಿಗೆ ತೆರಳ್ತಿದ್ದ ವೇಳೆ, ಮೈಲಾರಿ ಕುಟುಂಬಸ್ಥರು ರಸ್ತೆಯಲ್ಲೇ ಕುರಿಬಲಿ ಕೊಟ್ಟಿದ್ರು. ರಸ್ತೆಯಲ್ಲಿ ಕುರಿ ಬಲಿ ಕೊಟ್ಟಿದ್ದನ್ನ ನೋಡಿ ಎತ್ತುಗಳು ಬೆದರಿದವು. ಹೀಗಾಗಿ ದಾರಿಯಲ್ಲಿ ಏಕೆ ಕುರಿ ಬಲಿ ಕೊಟ್ಟಿದ್ದೀರಿ ಅಂತ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ಕುಡಿದು ದೇಗುಲದ ಗೋಡೆಗೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ಸಿಡೆಂಟ್ ಮಾಡಿ ಬಾಲಕನ ಕೊಲೆಪ್ರಶ್ನೆ ಮಾಡಿದ್ದನ್ನೇ ನೆಪಮಾಡಿಕೊಂಡ ಮೈಲಾರಿ, ಮುದುಕಪ್ಪ, ಯಲ್ಲಪ್ಪ ಸೇರಿದಂತೆ ಕುಟುಂಬಸ್ಥರೆಲ್ಲರೂ ಯುವಕರ ಮೇಲೆ ಎರಗಿ, ಮನಸ್ಸೋ ಇಚ್ಛೆ ಥಳಿಸಿದ್ದಾರೆ. 9 ಜನರ ದಾಳಿಗೆ ಒಳಗಾದ ಬಸವರಾಜ, ಸದಾಶಿವ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


