ಧಾರವಾಡ: ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ (Drought) ಘೋಷಣೆ ಮಾಡಬೇಕು. ಮುಂದಿನ ವಾರ ಬರಗಾಲ ಘೋಷಣೆ ಮಾಡುತ್ತೇವೆ. ಕೇಂದ್ರದ ಸಹಾಯ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.ಧಾರವಾಡ (Dharwad) ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ. ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ: ಡಿಕೆಶಿ ಟಾಂಗ್ನಾವು ಜಿಡಿಪಿ ಬೆಳವಣಿಗೆಗೆ ಕೃಷಿ, ಸೇವಾ ಹಾಗೂ ಕೈಗಾರಿಕಾ ವಲಯ ಆರಿಸುತ್ತೇವೆ. ಕೃಷಿ ವಲಯ ಬೆಳೆದರೆ ಜಿಡಿಪಿ ಬೆಳೆಯುತ್ತದೆ. ಕೃಷಿ ಬೆಳೆಯದೇ ಇದ್ದರೆ ತಲಾ ಆದಾಯ ಕಡಿಮೆಯಾಗಲಿದೆ. ಆಗ ಜನ ಕೊಂಡುಕೊಳ್ಳುವುದಿಲ್ಲ. ಕೃಷಿ ಜನರಿಗೆ ಆಸಕ್ತಿ ಬರಬೇಕು. ಯುವಕರಿಗೆ ಹೆಚ್ಚು ಆಸಕ್ತಿ ಇರಬೇಕು. ಟೀಚರ್ ಆಗಿ ನಿವೃತ್ತ ಆದರೂ ಒಬ್ಬರು ಕೃಷಿ ಮಾಡುತ್ತಿದ್ದಾರೆ. ಬೋರ್‌ವೆಲ್ ಹಾಕಿ ಕೃಷಿ ಮಾಡಿ ಯಶಸ್ಸು ಆಗಿದ್ದಾರೆ. ಎಲ್ಲ ರೈತರು ಆ ಪ್ರಯತ್ನ ಮಾಡಬೇಕು. ಅದಕ್ಕೆ ಪೂರಕ ಕೆಲಸ ವಿವಿ ಮಾಡಬೇಕು ಎಂದರು. ಇದನ್ನೂ ಓದಿ: ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ಮೈತ್ರಿ: ಡಿ.ಕೆ.ಸುರೇಶ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


