ಮಂಡ್ಯ: ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ (TamilNadu) ನಿರಂತರವಾಗಿ ನೀರು ಹರಿಸುತ್ತಿರುವ ಕಾರಣ ಕೆಆರ್‌ಎಸ್‌ನಲ್ಲಿ (KRS) ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 5 ದಿನಗಳಲ್ಲಿ 2 TMC ನೀರು ಖಾಲಿಯಾಗಿದ್ದು, ಜಲಾಶಯದಲ್ಲಿ ಸದ್ಯ 22 ಟಿಎಂಸಿಯಷ್ಟು ಮಾತ್ರ ನೀರು ಉಳಿದಿದೆ.ಬುಧವಾರ ಸುಪ್ರೀಂ ಕೋರ್ಟ್ (Supreme Court) ಕಾವೇರಿ ನೀರಿನ ಸಂಬಂಧ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡುವುದನ್ನು ಮುಂದುವರಿಸಿದರೆ, ಡ್ಯಾಂನಲ್ಲಿ ಒಟ್ಟು 3 ಟಿಎಂಸಿ ನೀರು ಖಾಲಿಯಾಗಲಿದೆ. ಒಂದು ವೇಳೆ ಇನ್ನೂ 10 ದಿನ ನೀರು ಬಿಟ್ಟರೆ 6 ಟಿಎಂಸಿಯಷ್ಟು ನೀರು ಖಾಲಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿಇದರಿಂದ 22.70 ಟಿಎಂಸಿ ನಷ್ಟಿರುವ ನೀರಿನ ಪ್ರಮಾಣ 17 ಟಿಎಂಸಿಗೆ ಕುಸಿಯಲಿದೆ. ಇದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ತೆಗೆದುಹಾಕಿದ್ರೆ 12 ಟಿಎಂಸಿಯಷ್ಟು ನೀರು ಮಾತ್ರ ಉಳಿಯಲಿದೆ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಸಿಗುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ಈಗಾಗಲೇ ಬೆಳೆದಿರುವ ಕಬ್ಬು ಬೆಳೆ ಬಣಗುತ್ತಿವೆ. ಇದೇ ಸ್ಥಿತಿ ಮುಂದುವರಿದರೆ ಉಳಿದ ಬೆಳೆಗಳಿಗೂ ಸಮಸ್ಯೆಯಾಗಲಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಗರ್ಭಿಣಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ – ರಾಜಸ್ಥಾನದಲ್ಲಿ ಮಹಿಳೆಯರ ಸುರಕ್ಷತೆ ನಿರ್ಲಕ್ಷ್ಯ ಎಂದು ನಡ್ಡಾ ಟೀಕೆನಿನ್ನೆ ಕಾವೇರಿ ವಿಚಾರದಲ್ಲಿ ಜಲಸಂಪನ್ಮೂಲ ಸಚಿವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ. ಮಾತಾಡೋ ಮುಂಚೆ ಅದರ ಫಲಾಫಲಗಳ ಬಗ್ಗೆ ಯೋಚನೆ ಮಾಡ್ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಅನ್ನದಾತರ ಹೋರಾಟ ಮುಂದುವರೆದಿರುವ ಹೊತ್ತಲ್ಲೇ ಜೆಡಿಎಸ್ ಕೂಡ ಬೀದಿಗಿಳಿದು ಹೋರಾಟ ಮುಂದುವರಿಸಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಕೇಳಿದಷ್ಟು ನೀರು ಬಿಡೋಕೆ ನಮ್ಮ ಬಳಿ ನೀರಿಲ್ಲ. ಪ್ರಧಾನಿ ಭೇಟಿಗೆ ಸಮಯ ಕೇಳಲಾಗಿದೆ ಅಂತ ಹೇಳಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


