ಬೆಂಗಳೂರು: ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ (N.Cheluvarayaswamy) ಶನಿವಾರ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಭೇಟಿ ನೀಡಿ ‌ರಾಜ್ಯದ ಹಾವಾಮಾನ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ನಿಖರ ಮಾಹಿತಿ ಪಡೆದರು.ವಿಕೋಪ‌ ಉಸ್ತುವಾರಿ ಕೇಂದ್ರದಲ್ಲಿ ವಿಜ್ಞಾನಿಗಳು, ತಜ್ಞರೊಂದಿಗೆ ಚರ್ಚಿಸಿದ ಸಚಿವರು ಮುಂದಿನ‌ ದಿನಗಳಲ್ಲಿ ರಾಜ್ಯದ ಹವಾಮಾನ ಪರಿಸ್ಥಿತಿ ಹಾಗೂ ರಾಜ್ಯ ಮೇಲಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ವರದಿ ಪಡೆದರು. ಇದನ್ನೂ ಓದಿ: G20ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ಕಳೆದ ಸಚಿವರು ಮುಂದಿನ ದಿನಗಳಲ್ಲಿ ಹಾಗೂ ಈ ವರ್ಷದಲ್ಲಿ ಜಿಲ್ಲೆ ಮತ್ತು ವಲಯವಾರು ಆಗಬಹುದಾದ ಮಳೆ, ಜಲಾಶಯಕ್ಕೆ ಹರಿದು ಬರಬಹುದಾದ‌ ನೀರು, ಹವಾಮಾನ, ರೈತರಿಗೆ ನೀಡಬಹುದಾದ ಮಾಹಿತಿ, ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ರೂಪಿಸಬೇಕಾದ ಯೋಜನೆಗಳ ಕುರಿತು ತಜ್ಞರಿಂದ ಮಾಹಿತಿ ಪಡೆದರು.ಹಾಲಿ ಬರಲಿರುವ ಮಳೆ‌ ಮಾರುತ, ಕಾವೇರಿ ಕೊಳ್ಳ ಸೇರಿದಂತೆ ಜಲಾನಯನ ಪ್ರದೇಶಗಳಲ್ಲಿ ಮತ್ತು ಉತ್ತರ ಕರ್ನಾಟಕದಲ್ಲಿ ‌ಮುಂದಿನ‌ ದಿನಗಳಲ್ಲಿ ಸುರಿಯಬಹುದಾದ ಮಳೆ, ಹಾಲಿ ಇರುವ ಬೆಳೆಗಳು ಉಳಿಯುವ ಸಾಧ್ಯತೆ ಹಾಗೂ ಮುಂದಿನ‌ ದಿನಗಳಲ್ಲಿ ರೈತರು ಅನುಸರಿಸಬೇಕಾದ ‌ಕ್ರಮಗಳ ಬಗ್ಗೆ ಸಚಿವರು ವಿವರಣೆ ಪಡೆದುಕೊಂಡರು. ಇದನ್ನೂ ಓದಿ: ಮತ್ತೆ ರೀ ಓಪನ್ ಆಗುತ್ತಾ ಸುರತ್ಕಲ್ ಟೋಲ್?ಇದೇ ವೇಳೆ ಸಚಿವರು ಹವಾಮಾನ ಮುನ್ಸೂಚನೆ ನೀಡುವ ವರುಣ ಮಿತ್ರ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ಸ್ವತಃ ಕರೆ ಸ್ವೀಕರಿಸಿ ಮಾತನಾಡಿದರು. ಅಲ್ಲದೆ ಮಳೆ‌ ಮಾಪನ‌, ಹವಾಮಾನ, ಗಾಳಿ ಮಾಪನ, ಭೂಕಂಪ ಮಾಪನ ಸಾಧನಗಳು ಹಾಗೂ ಅವುಗಳ ಕಾರ್ಯ ಸ್ವರೂಪದ ಬಗ್ಗೆ ಮಾಹಿತಿ ಪಡೆದರು.ಇದೇ ವೇಳೆ ಮಾತನಾಡಿದ ಸಚಿವರು, ಅನ್ನದಾತ ರಾಜ್ಯದ ಜೀವಾಳ. ಸರ್ಕಾರ, ಇಲಾಖೆಗಳು, ಸಂಸ್ಥೆಗಳು ಒಗ್ಗೂಡಿ ರೈತರ ಹಿತ ಕಾಯುವ ಮಾರ್ಗ ಹುಡುಕಿ ಕ್ರಮ‌ವಹಿಸಬೇಕಿದೆ. ಕೃಷಿಕರಿಗೆ ಯೋಜನೆಗಳ ಸೌಲಭ್ಯದ ಜೊತೆಗೆ ತಾಂತ್ರಿಕ ನೆರವು, ಮಾಹಿತಿ‌, ಮಾರ್ಗದರ್ಶನ ‌ನೀಡಬೇಕಿದೆ ಎಂದರು.ರಾಜ್ಯದಲ್ಲಿ ಈ ವಾರ ಮಳೆಯಾಗುವ ಬಗ್ಗೆ ವಿವರ ಪಡೆದ ಸಚಿವರು‌, ಇದರಿಂದ ರೈತರ ಸಂಕಷ್ಟ ದೂರಾಗಲಿ ಎಂದು ಆಶಿಸಿದರು. ಇದೇ ವೇಳೆ ಸಚಿವರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಾಮರ್ಥ್ಯ, ಪರಿಶ್ರಮ, ದೂರದೃಷ್ಟಿ ಕ್ರಮಗಳು, ಹಿರಿಮೆ, ತಾಂತ್ರಿಕ ಶ್ರೇಷ್ಠತೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಮಲತಾಯಿಯಿಂದ ಹಸುಗೂಸು ಕೊಲೆ- ಅಂತ್ಯಕ್ರಿಯೆ ಮಾಡಿದ್ದ ಸ್ಥಳದಲ್ಲಿ ಪೊಲೀಸರು ನಿಗಾನೈಸರ್ಗಿಕ ವಿಕೋಪ ‌ಉಸ್ತುವಾರಿ ಕೇಂದ್ರದ ಹಿರಿಯ ‌ಸಮಾಲೋಚಕ ಶ್ರೀನಿವಾಸ್ ರೆಡ್ಡಿ ಹಾಗೂ ಕಿರಿಯ ವೈಜ್ಞಾನಿಕ ಅಧಿಕಾರಿ ಸುನೀಲ್ ಗವಾಸ್ಕರ್ ಅವರು ಪ್ರಸ್ತುತ ಹಾವಾಮಾನ ಪರಿಸ್ಥಿತಿ, ಮುಂದಿನ ಮುನ್ಸೂಚನೆ, ವಿಪತ್ತು ನಿರ್ವಹಣಾ ಕೇಂದ್ರ ಕಾರ್ಯ ಸ್ವರೂಪ, ನಿಖರತೆ ಬಗ್ಗೆ ಮಾಹಿತಿ ನೀಡಿದರು. ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಶ್ರೀನಿವಾಸ್, ಕೃಷಿ ಸಚಿವರ ಅಪ್ತ ಕಾರ್ಯದರ್ಶಿ ಪ್ರಭಾಕರ್ ಮತ್ತಿತರರು ಹಾಜರಿದ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


