ಮಂಗಳೂರು: ಬೆಳ್ತಂಗಡಿಯ (Belthangady) ಪುದುವೆಟ್ಟುನಲ್ಲಿ ಗುರುವಾರ ಕಬಡ್ಡಿ ಆಟಗಾರ ಆತ್ಮಹತ್ಯೆ ಮಾಡಿಕೊಂಡಿರೋದಕ್ಕೆ ಲೋನ್ ಆ್ಯಪ್ ಹಾವಳಿಯೇ ಕಾರಣ ಅನ್ನೋ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ, ಉಜಿರೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ 24 ವರ್ಷದ ಸ್ವರಾಜ್ ನಿನ್ನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿರುವ ತನ್ನ ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದ. ಇದೀಗ ಆತ ಲೋನ್ ಆ್ಯಪ್ ಮೂಲಕ ಪಡೆದ ಸಾಲವೇ ಸಾವಿಗೆ ಕಾರಣ ಅನ್ನೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನೇಣು ಬಿಗಿದುಕೊಂಡು ಮಂಗಳೂರಿನ ಕಬಡ್ಡಿ ಆಟಗಾರ ಆತ್ಮಹತ್ಯೆಕೆಲ ತಿಂಗಳಿನಿಂದ ಎರಡು ಮೂರು ಲೋನ್ ಆ್ಯಪ್‍ಗಳಲ್ಲಿ ಸಾಲ ಪಡೆದಿದ್ದ. ಆಗಾಗ್ಗೆ ಲೋನ್ ಪಾವತಿ ಮಾಡಿದ್ದರೂ ಹೆಚ್ಚಿನ ಹಣಕ್ಕೆ ಕಂಪನಿಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು. ಸ್ವರಾಜ್ ತನ್ನ ವಾಟ್ಸಪ್ ಡಿಪಿಯಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದು, ಇದನ್ನೇ ಬಂಡವಾಳವನ್ನಾಗಿಸಿದ ಕಂಪನಿ ಫೋಟೋ ಎಡಿಟ್ ಮಾಡಿ ಚೈಲ್ಡ್ ಫಾರ್ ಸೇಲ್ ಎಂದು ಹಾಕಿ ಆತನ ಕಾಂಟೆಕ್ಟ್ ಲಿಸ್ಟ್ ಗೆ ಸೆಂಡ್ ಮಾಡಿದ್ದರು.ಈ ವಿಚಾರವನ್ನು ಸ್ನೇಹಿತರು ಸ್ವರಾಜ್‍ಗೆ ತಿಳಿಸಿದ್ದು ಬಳಿಕ ಆಗಸ್ಟ್ 30 ರಂದು ತನ್ನ ಬ್ಯಾಂಕ್ ಖಾತೆಯಿಂದ ಆ್ಯಪ್ ಕಂಪನಿಗೆ 30 ಸಾವಿರ ಕಟ್ಟಿದ್ದ.ಇನ್ನುಳಿದ ಹಣಕ್ಕೆ ನಿನ್ನೆ ಮಧ್ಯಾಹ್ನ 2 ಗಂಟೆಯವರೆಗೆ ಡೆಡ್ ಲೈನ್ ನೀಡಿದ್ರು. ಆದರೆ ಹಣ ಹೊಂದಿಸಲು ಸಾಧ್ಯವಾಗದೆ ಮನನೊಂದು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


