ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರನ್ನ ಜೈಲಿಗೆ ಕಳುಹಿಸಿದರು. ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ (BJP Office) ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈ ವಿರುದ್ಧ ಪಿತೂರಿ ನಡೆಸಿದ್ದೇ ಪಕ್ಷದವರು ಲೋಕಾಯುಕ್ತಕ್ಕೂ ದೂರು ಕೊಟ್ಟರು. ಯಡಿಯೂರಪ್ಪ ನಿರಪರಾಧಿ. ಲಿಂಗಾಯತರ ಬಣ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ನಾನು ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನೋಟಿಸ್ ಕೊಟ್ಟಿದ್ದಾರೆ. ಪಕ್ಷದ ಕಚೇರಿಯಿಂದ ಯಾರೋ ಕರೆ ಮಾಡಿ ಮೀಟಿಂಗ್ ಗೆ ಕರೆಯುತ್ತಾರೆ. ಬೇಷರತ್ತಾಗಿ ನೋಟಿಸ್ ವಾಪಸ್ ಪಡೆಯಲಿ ಎಂದರು.ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ (Davanagere Loksabha Constituency) ಕೇಳುತ್ತೇನೆ. ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡುವ ಕೆಲಸ ಆಗ್ತಿದೆ. ವಿಧಾನ ಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ಕೊಟ್ಟರು. ತಮ್ಮದೇ ಬಣ ಸೃಷ್ಟಿಸಿಕೊಂಡು ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ ಎಂದು ಹೆಸರು ಹೇಳದೆ ಬಿಎಲ್ ಸಂತೋಷ್ (BL Santhosh) ವಿರುದ್ಧ ಕಿರಿಕಾರಿದರು. ಇದನ್ನೂ ಓದಿ: ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ. ಇಂತಹವರಿಂದಲೇ ವಾಜಪೇಯಿ ಅವರು ಪ್ರಧಾನಿ ಆಗುವುದು ತಪ್ಪಿತು. ಲಿಂಗಾಯತರ ವಿರೋಧ ಮಾಡುತ್ತಿದ್ದಾರೆ. ಜಗದೀಶ್ ಶೆಟ್ಟರ್, ಈಶ್ವರಪ್ಪ, ಸವದಿಗೆ ಟಿಕೆಟ್ ತಪ್ಪಿಸಿದ್ದೇ ಇವರು. ಹಿಂದೆ ಪಕ್ಷ ಕಟ್ಟಲು ದಿ.ಅನಂತಕುಮಾರ್ ಮಾತ್ರ ಸಾಥ್ ಕೊಟ್ಟಿದ್ದು. ಇವರ ಪ್ರಣಾಳಿಕೆಯಿಂದಲೇ ಪಕ್ಷಕ್ಕೆ ಸೋಲಾಗಿದೆ. ಆತ್ಮಾವಲೋಕನದ ಅಗತ್ಯ ಇಲ್ಲ. ಸರ್ವಾಧಿಕಾರಿ ಧೋರಣೆ ಕೊನೆಯಾಗಬೇಕು. ರೇಣುಕಾಚಾರ್ಯ (MP Renukacharya) ಪಕ್ಷ ಬಿಡುತ್ತಾರೆ ಎಂದು ಕೆಲವರಿಂದ ಹೇಳಿಸುತ್ತಿದ್ದಾರೆ ಎಂದು ಗರಂ ಆದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


