– ಮುಡಾ ಮಾಜಿ ಆಯುಕ್ತರಿಗೆ ಬಿಗ್ ಶಾಕ್ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್ ಅವರನ್ನು ಅಮಾನತುಗೊಳಿಸಿದ ಸರ್ಕಾರ ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದೆ. ಹಾವೇರಿ ವಿವಿಯ ಕುಲಸಚಿವರಾಗಿ ಜಿ.ಟಿ.ದಿನೇಶ್ ಕುಮಾರ್‌ರನ್ನು ಸರ್ಕಾರ ನೇಮಕಾತಿ ಮಾಡಿತ್ತು. ಇದೀಗ ಆದೇಶವನ್ನು ದಿಢೀರ್ ರದ್ದು ಮಾಡಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಜಿ.ಪರಮೇಶ್ವರ್ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್‌ನನ್ನು ವರ್ಗಾವಣೆ ಮಾಡಿ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು.ಈಗ ಮತ್ತೆ ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ  ಆದೇಶವನ್ನು ರದ್ದು ಮಾಡಿದೆ. ಇದನ್ನೂ ಓದಿ: ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ಮುಡಾ ಹಗರಣದ ನಂತರ ಹಾವೇರಿ ವಿವಿಯ ಕುಲಸಚಿವರಾಗಿ ವರ್ಗಾವಣೆ ಮಾಡಿದ್ದು ಬಹಳ ಚರ್ಚೆಗೆ ಗ್ರಾಸವಾಗಿತ್ತು.Sign in to your account
Username or Email Address


Password

 Remember Me


