ಮೈಸೂರು: ದಸರಾ (Dasara 2024) ಗಜಪಡೆಗೆ (Dasara Elephants) ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು ಆರಂಭಗೊಂಡಿದೆ.ಮರಳು ಮೂಟೆ ಹೊರಿಸುವ ಮೂಲಕ ಜಂಬೂ ಸವಾರಿಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮರಳು ಮೂಟೆ ಹೊರಿಸುವ ಮುನ್ನ ಕೋಡಿ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದಸರಾ ಗಜಪಡೆಗೆ, ಗಾದಿ, ನಮ್ದಾ, ತೊಟ್ಟಿಲು, ಹಗ್ಗ ಹಾಗೂ ಮರಳು ಮೂಟೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಲಕ್ಷ್ಮೀ ಹಾಗೂ ವರಲಕ್ಷ್ಮೀ ಆನೆಗಳಿಗೆ ಸಾಂಕೇತಿಕವಾಗಿ ಡಿಸಿಎಫ್ ಡಾ.ಐ.ಬಿ ಪ್ರಭುಗೌಡ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು.ಇದರೊಂದಿಗೆ ಗಜಪಡೆಗೆ ವಾಕಿಂಗ್ ಮಾಡಿಸಲಾಗುತ್ತದೆ. ಅರಮನೆಯಿಂದ ಸಯ್ಯಾಜೀರಾವ್ ರಸ್ತೆ, ಆಯುವೇರ್ದಿಕ್ ವೃತ್ತದ ಮೂಲಕ ಜಂಬೂ ಬಜಾರ್ ತಲುಪಿ ಹೈವೇ ಸರ್ಕಲ್ ಮೂಲಕ ದಸರಾ ಗಜಪಡೆ ಬನ್ನಿಮಂಟಪ ತಲುಪಲಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದೆ. ಜಂಬೂಸವಾರಿಯ ದಿನ ಯಾವುದೇ ತೊಂದರೆಯಾಗದಿರಲಿ ಎಂದು ತಾಲೀಮು ನಡೆಸಲಾಗುತ್ತಿದೆ.Sign in to your account
Username or Email Address


Password

 Remember Me


