ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ (Pavithra Gowda), ಅನುಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಕೋರ್ಟ್‌ ಮುಂದೂಡಿದೆ. ಆರೋಪಿಗಳಾದ ವಿನಯ್, ಕೇಶವಮೂರ್ತಿ ಬೇಲ್ ಭವಿಷ್ಯ ಸೆಪ್ಟೆಂಬರ್ 2ಕ್ಕೆ ಗೊತ್ತಾಗಲಿದೆ. ಬುಧವಾರದ ವಿಚಾರಣೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ಹೊಸ ವಿಚಾರಗಳು ಅನಾವರಣಗೊಂಡಿವೆ. ಪವಿತ್ರಾಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ (Tami Sebastian) ವಾದ ಮಂಡಿಸಿದ್ರೆ, ಜಾಮೀನು ಕೊಡಬಾರದೆಂದು ಆಕ್ಷೇಪಿಸಿ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರಬಲ ವಾದ ಮಂಡನೆ ಮಾಡಿದರು.ಪವಿತ್ರಾಗೌಡ ಅರ್ಜಿ ವಿಚಾರಣೆ ವೇಳೆ ಪ್ರಬಲ ವಾದ ಮಂಡನೆ ಮಾಡಿದ ಎಸ್‌ಪಿಪಿ ಪ್ರಸನ್ನಕುಮಾರ್ (SPP Prasannakumar), ಪವಿತ್ರಾ ಗೌಡಗೆ ಜಾಮೀನು ನೀಡದಂತೆ ಆಕ್ಷೇಪಿಸಿದರು. ಮಹಿಳೆಯಾದರೂ ಜಾಮೀನು ಕೊಡಬಾರದು ಅಂತ ಕೇರಳ ಹಾಗೂ ಕೋಲ್ಕತ್ತಾ ಹೈಕೋರ್ಟ್ (Kolkata Highcoutt) ಆದೇಶಗಳನ್ನು ಉಲ್ಲೇಖಿಸಿದರು. ಮಹಿಳೆಯರಿಗೆ ವಿಶೇಷ ಅವಕಾಶ ಯಾಕೆ ಕೊಡಬೇಕು? ಕೇರಳದ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಹಾಕಿದ ಬಳಿಕವೂ ಜಾಮೀನು ನೀಡಿಲ್ಲ, ಆದ್ರೆ ಈ ಪ್ರಕರಣದಲ್ಲಿ ಇನ್ನೂ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿಲ್ಲ. ಆದ್ದರಿಂದ ಮಹಿಳೆ ಎಂಬ ಕಾರಣಕ್ಕೆ ಪವಿತ್ರಾಗೌಡಗೆ ಜಾಮೀನು ನೀಡಬಾರದು. ಏಕೆಂದರೆ `ಕೋಲ್ಡ್ ಬ್ಲಡೆಡ್ ಮರ್ಡರ್’ ಕೇಸ್‌ನಲ್ಲಿ ಪವಿತ್ರಾಗೌಡ ಭಾಗಿಯಾಗಿದ್ದಾರೆ ಎಂದು ವಾದಿಸಿದರು. ಇದನ್ನೂ ಓದಿ: ಹೆಂಡತಿ ಕೊಂದು ದೃಶ್ಯ ಸಿನಿಮಾ ಮಾದರಿಯಲ್ಲಿ ಹೂತಿಟ್ಟ; ಸ್ನೇಹಿತನ ಹೆಂಡತಿ ಕೊಲೆಯಲ್ಲಿ ಭಾಗಿಯಾಗಿ ಹಳೇ ಕೇಸಲ್ಲೂ ತಗ್ಲಾಕೊಂಡ ಖತರ್ನಾಕ್ಮುಂದುವರಿದು, ಪವಿತ್ರಾಗೌಡ ಕೊಲೆಯಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಇತರೆ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ಮಾಹಿತಿಯನ್ನ ಕೋರ್ಟ್ ಕೊಟ್ಟಿದ್ದೇವೆ. ಕೊಲೆ ಮಾಡುವ ಉದ್ದೇಶದಿಂದ ರೇಣುಕಾಸ್ವಾಮಿಯನ್ನ ಅಪಹರಣ ಮಾಡಲಾಗಿದೆ. ನಂತರ ಆರೋಪಿಗಳು ತೀವ್ರ ಹಲ್ಲೆ ಮಾಡಿ ಕೊಲೆಮಾಡಿದ್ದಾರೆ. ಆರೋಪಿ ಕೇಶವಮೂರ್ತಿ ಕೂಡ ಕೇವಲ ಸಾಕ್ಷಿ ನಾಶ ಮಾಡಿಲ್ಲ, ಈ ಪ್ರಕರಣದಲ್ಲಿ ಆತನದ್ದು ಬಹುಮುಖ್ಯವಾದ ಪಾತ್ರ ಇದೆ. ತನಿಖೆ ಸಹ ಇನ್ನು ಮುಕ್ತಾಯ ಆಗಿಲ್ಲ. ಹೀಗಾಗಿ ಯಾವ ಆರೋಪಿಗಳಿಗೂ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದರೆ ಜೀವಾವಧಿ ಶಿಕ್ಷೆ – ಯುಪಿಯಲ್ಲಿ ಹೊಸ ಸಾಮಾಜಿಕ ಜಾಲತಾಣ ನೀತಿ ಜಾರಿಎಸ್‌ಪಿಪಿ ವಾದದ ಪ್ರಮುಖ ಅಂಶಗಳು? 
* ಪವಿತ್ರಗೌಡ ಶೆಡ್‌ಗೆ ಹೋಗಿಯೇ ಇಲ್ಲ ಅಂತಾರೆ,
* ಆದರೆ, ಪವಿತ್ರಗೌಡರನ್ನು ದರ್ಶನ್ ಕರೆದೊಯ್ಯುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
* ಆಕೆಯ ಚಪ್ಪಲಿಯಲ್ಲಿ ರಕ್ತದ ಕಲೆ ಪತ್ತೆಯಾಗಿದೆ, ಎಫ್‌ಎಸ್‌ಎಲ್ ವರದಿಯಲ್ಲೂ ದೃಢಪಟ್ಟಿದೆ.
* ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್ ನೀಡಲಾಗಿದೆ, ಇದರಿಂದ 39 ಕಡೆ ಗಾಯ ಆಗಿದೆ.
* ರೇಣುಕಾಸ್ವಾಮಿಯ ಎದೆ ಪಕ್ಕೆಲುಬು ಮುರಿದಿದೆ, ಶ್ವಾಸಕೋಶ ಡ್ಯಾಮೇಜ್ ಆಗಿದೆ.
* ಘಟನಾ ಸ್ಥಳದಲ್ಲಿ ಆರೋಪಿಗಳ ಇರುವಿಕೆ ಬಗ್ಗೆ ಸಾಕ್ಷ್ಯ ಇದೆ.
* ಕೋಲ್ಡ್ ಬ್ಲಡೆಡ್ ಮರ್ಡರ್‌ನಲ್ಲಿ ಪವಿತ್ರಾಗೌಡ ಭಾಗಿಯಾಗಿದ್ದಾರೆ.
* ತನಿಖೆ ಇನ್ನೂ ಮುಕ್ತಾಯ ಆಗಿಲ್ಲ, ಆದ್ದರಿಂದ ಆರೋಪಿಗಳಿಗೆ ಜಾಮೀನು ನೀಡಬಾರದೆಂದು ಆಕ್ಷೇಪ.ಪವಿತ್ರಾಗೌಡ ಪರ ವಕೀಲರ ವಾದ ಏನು?
* ಪವಿತ್ರಾಗೌಡ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಅನ್ನೋದು ಕಪೋಲಕಲ್ಪಿತ
* ದರ್ಶನ್ ಪವಿತ್ರಾಗೌಡ ಮನೆಗೆ ಹೋಗಿ ಕರೆದೊಯ್ದಿದ್ರು ಅಷ್ಟೇ
* ಹೀಗಿರುವಾಗ ಇದರಲ್ಲಿ ಪವಿತ್ರಾಗೌಡ ಅವರ ಸಂಚು ಏನಿದೆ..?
* ಎದೆಗೆ ಪೆಟ್ಟುಬಿದ್ದ ಕಾರಣ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ
* ಹೀಗಾಗಿ ಪವಿತ್ರಾಗೌಡ ಹಲ್ಲೆಯಿಂದ ರೇಣುಕಾಸ್ವಾಮಿ ಸಾವನ್ನಪ್ಪಿಲ್ಲ
* ಪವಿತ್ರಾಗೌಡ ವಿರುದ್ಧ ಗಂಭೀರ ಆರೋಪ ಇಲ್ಲ.. ಆದ್ದರಿಂದ ಬೇಲ್ ಕೊಡಬೇಕು ಅಂತ ಮನವಿ ಮಾಡಿದರು. ಇದನ್ನೂ ಓದಿ: ಪೂರ್ಣಚಂದ್ರ ತೇಜಸ್ವಿ ತಂದೆಯ ನೆರಳಿನಿಂದ ಹೊರಬಂದು ಸ್ವಂತ ಆಲೋಚನೆ ಬೆಳೆಸಿಕೊಂಡರು: ಸಿದ್ದರಾಮಯ್ಯ Sign in to your account
Username or Email Address


Password

 Remember Me


