ಕೊಪ್ಪಳ: ಗಂಗಾವತಿ ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ ತೆರವಿಗೆ ತಹಶೀಲ್ದಾರ್‌ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ.ಆಗಸ್ಟ್‌ 28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಶೀಲ್ದಾರ್‌ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ನೀಡಿರುವ ಆದೇಶದ ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗಿನ ರಸ್ತೆ ನಗರ ಸಭೆ ವ್ಯಾಪ್ತಿಗೆ ಬರುತ್ತಿದೆ. ಇಲ್ಲಿ ಕೆಐಆರ್‌ಡಿಎಲ್‌ ಸಂಸ್ಥೆ ಸ್ಥಾಪಿಸಿದ ವಿದ್ಯುತ್‌ ಕಂಬಗಳು (Electric Pole) ಧಾರ್ಮಿಕ ಸೌಹಾರ್ದತೆ ಹಾಗೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಿದೆ. ಇದು ನಗರದಲ್ಲಿ ಸಾರ್ವಜನಿಕರ ಶಾಂತಿಗೆ ಭಂಗ ಉಂಟುಮಾಡುವ ಸಾಧ್ಯತೆಗಳು ಇರುವುದರಿಂದ ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಈ ಕಾಮಗಾರಿ ಕೈಗೊಂಡಿರುವ ಕೆಆರ್‌ಐಡಿಎಲ್‌ ಎಂಜಿನಿಯರ್‌ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ತಹಶೀಲ್ದಾರ್‌ ನಾಗರಾಜ್‌ ಅವರು ಸೂಚಿಸಿದ್ದಾರೆ.ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಜನಾರ್ದನ ರೆಡ್ಡಿ ಅವರು ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳು ಇರುವ ಚಿತ್ರಗಳನ್ನು ಅಳವಡಿಸಲಾಗಿತ್ತು.ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿಂದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲದೇ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲೂ ಶಾಸಕ ಜನಾರ್ದನ ರೆಡ್ಡಿ ಅವರು ವಿಷಯ ಪ್ರಸ್ತಾಪಿಸಿ ಈ ವಿಷಯದಲ್ಲಿ ಅನಾವಶ್ಯಕ ಗೊಂದಲ ಸೃಷ್ಟಿಸದೇ ಎಲ್ಲರೂ ಸಹಕಾರ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌ – ದಾಸನಿಗಾಗಿ ರೂಟ್‌ ಮ್ಯಾಪ್‌ ಚೇಂಜ್‌?ಏನಿದು ವಿವಾದ?
ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿತ್ತು.ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸುವಂತೆ ಗಂಗಾವತಿ ನಗರಸಭೆ ಕಮಿಷನರ್‌ಗೆ SDPI ಮನವಿ ಮಾಡಿತ್ತು.ಗಂಗಾವತಿಯಿಂದ 12 ಕಿಲೋ ಮೀಟರ್ ದೂರದಲ್ಲಿ ಹನುಮ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದವರೆಗೂ ಇದೆ ಮಾದರಿಯಲ್ಲಿ ಬೀದಿ ದೀಪಗಳು ಅಳವಡಿಕೆ ಮಾಡಲಾಗುತ್ತಿತ್ತು. ಇಲ್ಲಿಗೆ ಲಕ್ಷಾಂತರ ಹನುಮ ಭಕ್ತರು ಹಾಗೂ ಪ್ರವಾಸಿಗರು ಬರುತ್ತಾರೆ. ಇಂತಹ ಪ್ರವಾಸಿ ಸ್ಥಳದಲ್ಲಿ, ಬೀದಿ ದೀಪಗಳು ಸುಂದರವಾಗಿ ಕಾಣಲಿ ಎಂಬ ಉದ್ದೇಶಕ್ಕೆ ಹಾಕಲಾಗಿದೆ. ಇದರಲ್ಲಿ ಕೋಮು ಸೌಹಾರ್ದತೆ ಕದಡುವ ಅಂಶ ಏನಿದೆ ಎಂದು ಹಿಂದೂ ಮುಖಂಡರು ಪ್ರಶ್ನಿಸಿದ್ದರು. Sign in to your account
Username or Email Address


Password

 Remember Me


