– ಕಾಡಿನ ಮಧ್ಯದಿಂದ  ಸ್ಟ್ರೆಚರ್ ಮೂಲಕ 2 ಕಿ.ಮೀ ಟೆಕ್ಕಿ ಹೊತ್ತು ತಂದ ಯುವಕರುಚಿಕ್ಕಬಳ್ಳಾಪುರ: ಜಲಪಾತ ನೋಡಲು ಆಗಮಿಸಿದ್ದ ಮಹಿಳಾ ಟೆಕ್ಕಿ ಜಾರಿಬಿದ್ದು ಕಾಲು ಮುರಿದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಜಲಪಾತದ (Kethanahalli Falls) ಬಳಿ ನಡೆದಿದೆ.ಮುಂಬೈ ಮೂಲದ ಅರ್ಪಿತಾ ಕಾಲು ಮುರಿತಕ್ಕೊಳಗಾದ ಮಹಿಳೆ. ಈಕೆ ಬೆಂಗಳೂರಿನಲ್ಲಿ ಟೆಕ್ಕಿಯಾಗಿ (Techie) ಕೆಲಸ ಮಾಡುತ್ತಿದ್ದರು. ಅರ್ಪಿತಾ ಸ್ನೇಹಿತರೊಂದಿಗೆ ಕೇತೇನಹಳ್ಳಿ ಜಲಪಾತ ವೀಕ್ಷಿಸಲು ಬಂದಿದ್ದರು. ಜಲಪಾತದಲ್ಲಿ ಆಟವಾಡಿ ವಾಪಸ್ ಬರುವ ವೇಳೆ ಕಾಡಿನ ಮಧ್ಯೆ ಕಿರಿದಾದ ಹಾದಿಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಘಟನೆಯ ಬಳಿಕ ಕೆಲ ಯುವಕರು ಕಾಡಿನ ಮಧ್ಯದಿಂದ 2 ಕಿಲೋ ಮೀಟರ್ ಸ್ಟ್ರೆಚರ್ ಮೂಲಕ ಅರ್ಪಿತಾರನ್ನು ಹೊತ್ತು ಕಾಡಿನ ಹಾದಿಯಲ್ಲಿ ಹರಸಾಹಸ ಪಟ್ಟು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯರು, ಅಂಬುಲೆನ್ಸ್ ಚಾಲಕ ಹಾಗೂ ಪೊಲೀಸರ ಸಹಾಯದಿಂದ ಅರ್ಪಿತಾ ಅವರನ್ನು ಚಿಕ್ಕಬಳ್ಳಾಪುರದ (Chikkaballapura) ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಲಾರಿ ಚಾಲಕನ ನಿರ್ಲಕ್ಷ್ಯ – 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆಪ್ರಕರಣದ ಬಳಿಕ ಕೇತೇನಹಳ್ಳಿ ಫಾಲ್ಸ್‌ಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜಲಪಾತ ನೋಡಲು ಯಾರೂ ಬಾರದಂತೆ ಅರಣ್ಯಾಧಿಕಾರಿಗಳು ಪ್ರವಾಸಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅರಣ್ಯದೊಳಗೆ ಪ್ರವೇಶ ಮಾಡದಂತೆ ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದು, ಸ್ಥಳದಲ್ಲೇ ಅರಣ್ಯ ಇಲಾಖೆಯ ಗಾರ್ಡ್ ನೇಮಿಸುವುದಾಗಿ ಹೇಳಿದ್ದಾರೆ. ಅಲ್ಲದೇ ಅರಣ್ಯದೊಳಗೆ ಪ್ರವೇಶ ಮಾಡಬಾರದು ಎಂಬ ನಾಮಫಲಕ ಆಳವಡಿಸಲು ನಿರ್ಧರಿಸಿರುವುದಾಗಿ ಜಿಲ್ಲಾ ಅರಣ್ಯ ಇಲಾಖಾಧಿಕಾರಿ ರಮೇಶ್ ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್‌ ಧವನ್‌






 Advertisement 




Sign in to your account
Username or Email Address


Password

 Remember Me


